ಅಬಕಾರಿ ನೀತಿ ಹಗರಣ: ಅರವಿಂದ ಕೇಜ್ರಿವಾಲ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
Updated on

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ.

ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಅರ್ಜಿಯ ಕುರಿತು ಆರೋಪಿ ಮತ್ತು ಜಾರಿ ನಿರ್ದೇಶನಾಲಯದ (ಇ.ಡಿ) ವಾದಗಳನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದ್ದಾರೆ.

ಪ್ರಕರಣದಲ್ಲಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 3ರವರೆಗೆ ನ್ಯಾಯಾಲಯ ಬುಧವಾರ ವಿಸ್ತರಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3 ರವರೆಗೆ ವಿಸ್ತರಿಸಿದ ಕೋರ್ಟ್

ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದಿದ್ದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನ್ಯಾಯಾಧೀಶರು ಕೇಜ್ರಿವಾಲ್ ಅವರ ಕಸ್ಟಡಿಯನ್ನು ವಿಸ್ತರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com