ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧಿರ್ ರಂಜನ್ ಚೌಧರಿ ರಾಜೀನಾಮೆ

ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಇಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
adhir ranjan Chowdhury
ಅಧಿರ್ ರಂಜನ್ ಚೌದರಿ
Updated on

ಕೋಲ್ಕತ್ತ: ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಇಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕಳಪೆ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಅಧಿರ್ ರಂಜನ್ ಚೌಧರಿ ಡಬ್ಲ್ಯುಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮೂಲಗಳ ಪ್ರಕಾರ, ಅಧಿರ್ ರಂಜನ್ ಚೌಧರಿ ರಾಜೀನಾಮೆ ವಿಷಯವಾಗಿ ಕಾಂಗ್ರೆಸ್ ಹೈಕಮಾಂಡ್ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಟಿಎಂ ಸಿ ಅಭ್ಯರ್ಥಿ ಯೂಸೂಫ್ ಪಠಾಣ್ ವಿರುದ್ಧ ಪರಾಭವಗೊಂಡಿದ್ದ ಅಧಿರ್ ರಂಜನ್ ಚೌಧರಿ, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಮ್ಮನ್ನು ಸೋಲಿಸುವ ಗೇಮ್ ಪ್ಲ್ಯಾನ್ ನಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದರು.

adhir ranjan Chowdhury
ಈ ವರ್ಷ 69 ಭಾರಿ ತೈಲೆ ಬೆಲೆ ಹೆಚ್ಚಳ, ಸರ್ಕಾರಕ್ಕೆ 5 ಲಕ್ಷ ಕೋಟಿ ರೂ. ಆದಾಯ: ಅಧಿರ್ ರಂಜನ್ ಚೌಧರಿ

ಚೌಧರಿ ಅವರು ತಮ್ಮ ವಿರೋಧಿಗಳು ತಮ್ಮ ಮತದಾರರನ್ನು ಧಾರ್ಮಿಕ ಆಧಾರದ ಮೇಲೆ ದೂರ ಮಾಡಲು ಪ್ರಯತ್ನಿಸಿದರೂ, ಎಲ್ಲಾ ಧರ್ಮಗಳಾದ್ಯಂತ ಹೆಚ್ಚಿನ ಸಂಖ್ಯೆಯ ಜನರು ತಮಗೆ ಮತ ಹಾಕಿದ್ದಾರೆ ಆದಾಗ್ಯೂ, 1999 ರಿಂದ ಲೋಕಸಭೆಗೆ ತನ್ನ ಪ್ರತಿನಿಧಿಯಾಗಿ ಕಳುಹಿಸಿದ್ದ ಬಹರಂಪುರ ಲೋಕಸಭಾ ಕ್ಷೇತ್ರದಿಂದ ಸತತ ಆರನೇ ಅವಧಿಗೆ ಗೆಲ್ಲುವಷ್ಟು ಮತಗಳನ್ನು ಗಳಿಸಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com