ಗುರುವಾರ ಕಲ್ಲಕುರಿಚಿಯ ಕರುಣಾಪುರಂ ಪ್ರದೇಶದಲ್ಲಿ ಅಕ್ರಮ ಮದ್ಯ ಸೇವಿಸಿ ಸಾವಿಗೀಡಾದ ಸಂತ್ರಸ್ತರ ಶವಗಳನ್ನು ಸುಡಲಾಯಿತು.
ಗುರುವಾರ ಕಲ್ಲಕುರಿಚಿಯ ಕರುಣಾಪುರಂ ಪ್ರದೇಶದಲ್ಲಿ ಅಕ್ರಮ ಮದ್ಯ ಸೇವಿಸಿ ಸಾವಿಗೀಡಾದ ಸಂತ್ರಸ್ತರ ಶವಗಳನ್ನು ಸುಡಲಾಯಿತು.

ತಮಿಳುನಾಡು ಅಕ್ರಮ ಮದ್ಯ ಸೇವನೆ ಪ್ರಕರಣ: ಕಲ್ಲಕುರಿಚಿ ದುರಂತದಲ್ಲಿ ಸಾವಿನ ಸಂಖ್ಯೆ 49ಕ್ಕೆ ಏರಿಕೆ

ಸುಮಾರು 115 ಜನರು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮತ್ತು ಸೇಲಂ, ವಿಲ್ಲುಪುರಂ, ಪುದುಚೇರಿಯ ಜಿಪ್ಮರ್‌ನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Published on

ಚೆನ್ನೈ: ಕಲ್ಲಕುರಿಚಿಯ ಕರುಣಾಪುರಂನಲ್ಲಿ ನಕಲಿ ಮದ್ಯ ಸೇವಿಸಿ ಮತ್ತೆ ಹತ್ತು ಮಂದಿ ಪ್ರಾಣ ಕಳೆದುಕೊಂಡಿದ್ದು, ಈ ಮೂಲಕ ಕಲ್ಲಕುರಿಚಿ ಅಕ್ರಮ ಮದ್ಯ ಸೇವನೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.

ಸುಮಾರು 115 ಜನರು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮತ್ತು ಸೇಲಂ, ವಿಲ್ಲುಪುರಂ, ಪುದುಚೇರಿಯ ಜಿಪ್ಮರ್‌ನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರಲ್ಲಿ 25 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಅಕ್ರಮ ಮದ್ಯ ಸೇವಿಸಿ ಸಾವಿಗೀಡಾದ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹಾಗೂ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಗುರುವಾರ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ ಸಚಿವ ಉದಯನಿಧಿ ಸ್ಟಾಲಿನ್, ಸಂತ್ರಸ್ತರಿಗೆ ಸಹಾಯಧನದ ಚೆಕ್ ವಿತರಿಸಿ, ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗುರುವಾರ ಕಲ್ಲಕುರಿಚಿಯ ಕರುಣಾಪುರಂ ಪ್ರದೇಶದಲ್ಲಿ ಅಕ್ರಮ ಮದ್ಯ ಸೇವಿಸಿ ಸಾವಿಗೀಡಾದ ಸಂತ್ರಸ್ತರ ಶವಗಳನ್ನು ಸುಡಲಾಯಿತು.
ತಮಿಳುನಾಡು ಅಕ್ರಮ ಮದ್ಯ ದುರಂತ: ಸಾವಿನ ಸಂಖ್ಯೆ 37ಕ್ಕೆ ಏರಿಕೆ; ಇನ್ನೂ ಹೆಚ್ಚಾಗುವ ಸಾಧ್ಯತೆ

ಸಾವಿಗೆ ಕಾರಣವಾದ ಮೆಥೆನಾಲ್ ಮೂಲದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಸಿಎಂ ಸ್ಟಾಲಿನ್ ಹೇಳಿದ್ದಾರೆ. ಪ್ರಕರಣದಲ್ಲಿ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com