ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಗೆ ಜುಲೈ 12 ರವರೆಗೆ ನ್ಯಾಯಾಂಗ ಬಂಧನ

ಸಿಬಿಐ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ರೋಸ್‌ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು.
Arvind Kejriwal
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕಸ್ಟಡಿಯಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಜುಲೈ 12ರವರೆಗೆ, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ರೋಸ್‌ ಅವೆನ್ಯೂ ಕೋರ್ಟ್ ಶನಿವಾರ ಆದೇಶಿಸಿದೆ.

ಸಿಬಿಐ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ರೋಸ್‌ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು. ಮತ್ತು ‘ತನಿಖೆ ಮತ್ತು ನ್ಯಾಯದ ಹಿತಾಸಕ್ತಿ’ಗಾಗಿ ಕೇಜ್ರಿವಾಲ್ ಅವರ ಕಸ್ಟಡಿ ಅಗತ್ಯವಿದೆ ಎಂದು ಈ ವೇಳೆ ಸಿಬಿಐ ವಾದಿಸಿತು.

ಆರೋಪಿಯ ವಿಚಾರಣೆ ನಡೆಸಿದ ರಜಾಕಾಲದ ನ್ಯಾಯಾಧೀಶರಾದ ಸುನೇನಾ ಶರ್ಮಾ ಅವರು, ಸಿಬಿಐ ಮನವಿಯನ್ನು ತಿರಸ್ಕರಿಸಿದ್ದು, ಕೇಜ್ರಿವಾಲ್ ಅವರನ್ನು ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

Arvind Kejriwal
Delhi excise policy case: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 3 ದಿನ CBI ವಶಕ್ಕೆ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ನ್ಯಾಯಾಲಯದ ರಜಾಕಾಲದ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಈ ಹಿಂದೆ ಜೂನ್ 26 ರಂದು ಕೇಜ್ರಿವಾಲ್ ಅವರನ್ನು 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದ್ದರು.

ಕೇಜ್ರಿವಾಲ್ ಪರ ವಿಚಾರಣೆಗೆ ಹಾಜರಾದ ಹಿರಿಯ ವಕೀಲ ವಿಕ್ರಮ್ ಚೌಧರಿ ಅವರು, ಆಗಸ್ಟ್ 2022 ರಿಂದ ಈ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಹೇಳಿದರು. "ನನ್ನ ಕಕ್ಷಿದಾರರನ್ನು ಮಾರ್ಚ್ 21 ರಂದು ಇಡಿ ಬಂಧಿಸಿದೆ. ಮೇ 10 ರಂದು ಮೂರು ವಾರಗಳವರೆಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು" ಎಂದು ಚೌಧರಿ ನ್ಯಾಯಾಲಯಕ್ಕೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com