ಗೌತಮ್ ಗಂಭೀರ್ ನಂತರ ಬಿಜೆಪಿಯ ಜಯಂತ್ ಸಿನ್ಹಾ ಸಹ ರಾಜಕೀಯದಿಂದ ನಿವೃತ್ತಿ

ಭಾರತೀಯ ಜನತಾ ಪಕ್ಷದ ಮತ್ತೊಬ್ಬ ಸಂಸದ ಜಯಂತ್ ಸಿನ್ಹಾ ಅವರು ಚುನಾವಣಾ ಕರ್ತವ್ಯಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಶನಿವಾರ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವಿನಂತಿಸಿದ್ದಾರೆ.
ಜಯಂತ್ ಸಿನ್ಹಾ
ಜಯಂತ್ ಸಿನ್ಹಾ

ನವದೆಹಲಿ: ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ರಾಜಕೀಯಕ್ಕೆ ವಿದಾಯ ಹೇಳಿದ ಬೆನ್ನಲ್ಲೇ ಭಾರತೀಯ ಜನತಾ ಪಕ್ಷದ ಮತ್ತೊಬ್ಬ ಸಂಸದ ಜಯಂತ್ ಸಿನ್ಹಾ ಅವರು ಚುನಾವಣಾ ಕರ್ತವ್ಯಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಶನಿವಾರ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವಿನಂತಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಜಿ ಕೇಂದ್ರ ಸಚಿವ ಜಯಂತ್ ಸಿನ್ಹಾ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹಲವು ಹೊಸ ನಾಯಕರಿಗೆ ಟಿಕೆಟ್ ನೀಡಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಟಿಕೆಟ್ ಕೈ ತಪ್ಪುವ ಸೂಚನೆ ಸಿಕ್ಕ ಕೆಲವು ಹಾಲಿ ಸಂಸದರು ಪಕ್ಷ ಸಂಘಟನೆಯಂತಹ ಇತರ ಕೆಲಸಗಳತ್ತ ಗಮನ ಹರಿಸಲು ಮುಂದಾಗಿದ್ದಾರೆ.

ಜಯಂತ್ ಸಿನ್ಹಾ
ರಾಜಕೀಯಕ್ಕೆ ಗೌತಮ್ ಗಂಭೀರ್ ಗುಡ್ ಬೈ? ಮತ್ತೆ ಕ್ರಿಕೆಟ್ ನತ್ತ ಚಿತ್ತ!

ನಾನು ಚುನಾವಣಾ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಇದರಿಂದಾಗಿ ನಾನು ಭಾರತ ಮತ್ತು ಪ್ರಪಂಚದಾದ್ಯಂತ ಜಾಗತಿಕ ಹವಾಮಾನ ಬದಲಾವಣೆಯನ್ನು ಎದುರಿಸುವ ಕೆಲಸಗಳಲ್ಲಿ ನನ್ನ ಪ್ರಯತ್ನಗಳನ್ನು ಕೇಂದ್ರೀಕರಿಸುತ್ತೇನೆ ಎಂದು ಸಿನ್ಹಾ ಅವರು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಪೂರ್ವ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ತಮ್ಮ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸಲು, ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ಅಧ್ಯಕ್ಷರಿಗೆ ಕೇಳಿಕೊಂಡಿರುವುದಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com