ನವದೆಹಲಿ: ಜಯಂತ್ ಚೌಧರಿ ಅವರ ರಾಷ್ಟ್ರೀಯ ಲೋಕ ದಳ ಔಪಚಾರಿಕವಾಗಿ ಶನಿವಾರ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದರು.
ರಾಷ್ಟ್ರ ರಾಜಧಾನಿಯಲ್ಲಿ ಅಮಿತ್ ಶಾ ಅವರನ್ನು ಚೌಧರಿ ಭೇಟಿಯಾದ ಬಳಿಕ ಎನ್ ಡಿಎಗೆ ಸೇರ್ಪಡೆಯಾಗಿರುವುದಾಗಿ ಅವರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.
ಆರ್ ಎಲ್ ಪಿ ಮೊದಲಿಗೆ ವಿಪಕ್ಷಗಳ ಮೈತ್ರಿಕೂಟದಲ್ಲಿತ್ತು. ಆದರೆ, ಇದೀಗ ಬಿಜೆಪಿಯೊಂದಿಗೆ ಸೇರ್ಪಡೆಯಿಂದಾಗಿ ವಿಪಕ್ಷಗಳ ಮೈತ್ರಿಕೂಟಕ್ಕೆ ಮತ್ತೊಂದು ದೊಡ್ಡ ಹೊಡೆತ ಬಿದ್ದಂತಾಗಿದೆ.
ಚೌಧರಿ ಜೊತೆಗಿನ ಫೋಟೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಅಮಿತ್ ಶಾ, ಎನ್ ಡಿಎ ಕುಟುಂಬಕ್ಕೆ ರಾಷ್ಟ್ರೀಯ ಲೋಕ ದಳ ಅಧ್ಯಕ್ಷ ಜಯಂತ್ ಚೌಧರಿ ಅವರಿಗೆ ಸ್ವಾಗತ, ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಮತ್ತು ಅಮೃತ ಕಾಲದಲ್ಲಿ ದೇಶದ ಅಭಿವೃದ್ಧಿಗಾಗಿ ಬದ್ದವಾಗಿದೆ ಎಂದು ಹೇಳಿದ್ದಾರೆ.
Advertisement