ಷಹಜಹಾನ್ ಶೇಖ್ ಅಪಾರ್ಟ್‌ಮೆಂಟ್, ಜಮೀನು ಜಪ್ತಿ ಮಾಡಿದ ಇಡಿ

ಷಹಜಹಾನ್ ಶೇಖ್
ಷಹಜಹಾನ್ ಶೇಖ್

ಕೋಲ್ಕತಾ: ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಅಮಾನತುಗೊಂಡ ತೃಣಮೂಲ ಕಾಂಗ್ರೆಸ್ ನಾಯಕ ಷಹಜಹಾನ್ ಶೇಖ್ ಅವರ ಬ್ಯಾಂಕ್ ಠೇವಣಿ, ಅಪಾರ್ಟ್‌ಮೆಂಟ್ ಮತ್ತು ಸಂದೇಶಖಾಲಿ ಹಾಗೂ ಕೋಲ್ಕತ್ತಾದಲ್ಲಿನ ಕೃಷಿ ಜಮೀನು ಸೇರಿದಂತೆ ಒಟ್ಟು 12.78 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ತಿಳಿಸಿದೆ.

ಷಹಜಹಾನ್ ಶೇಖ್ ಅವರ ಆಸ್ತಿಗಳನ್ನು ಜಪ್ತಿ ಮಾಡಲು ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ತಾತ್ಕಾಲಿಕ ಆದೇಶವನ್ನು ಹೊರಡಿಸಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಜನವರಿ 5 ರಂದು ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಗೆ ತೆರಳಿದ್ದ ಇಡಿ ತಂಡದ ಮೇಲೆ ಶೇಖ್ ಬೆಂಬಲಿಗರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಷಹಜಹಾನ್ ಶೇಖ್
ಸಂದೇಶಖಾಲಿ ಪ್ರಕರಣ: ಷಹಜಹಾನ್ ಶೇಖ್ ರನ್ನು ಸಿಬಿಐಗೆ ಹಸ್ತಾಂತರಿಸಿ; ಬಂಗಾಳ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಈ ಪ್ರಕರಣ ಸಂಬಂಧ ಫೆಬ್ರವರಿ 29 ರಂದು ಷಹಜಹಾನ್ ಶೇಖ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದರು.

ಬಂಧನದ ನಂತರ ಟಿಎಂಸಿ ನಾಯಕನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com