ಪಶ್ಚಿಮ ಬಂಗಾಳ: ಲೋಕಸಭೆ ಚುನಾವಣೆಗೂ ಮುನ್ನ ಟಿಎಂಸಿ ಮಾಜಿ ನಾಯಕ ತಪಸ್ ರಾಯ್ ಬಿಜೆಪಿ ಸೇರ್ಪಡೆ

ಇತ್ತೀಚಿಗಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮಾಜಿ ನಾಯಕ ತಪಸ್ ರಾಯ್ ಅವರು ಬುಧವಾರ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಸೇರಿದ್ದಾರೆ.
ತಪಸ್ ರಾಯ್
ತಪಸ್ ರಾಯ್
Updated on

ಕೋಲ್ಕತ್ತಾ: ಇತ್ತೀಚಿಗಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮಾಜಿ ನಾಯಕ ತಪಸ್ ರಾಯ್ ಅವರು ಬುಧವಾರ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಸೇರಿದ್ದಾರೆ.

ಟಿಎಂಸಿಯ ಹಿರಿಯ ನಾಯಕ ತಪಸ್ ರಾಯ್ ಅವರು ಕಳೆದ ಸೋಮವಾರ ಪಕ್ಷದ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ಮತ್ತು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಇಂದು ಕೋಲ್ಕತ್ತಾದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸಮ್ಮುಖದಲ್ಲಿ ತಪಸ್ ರಾಯ್ ಅವರು ಕೇಸರಿ ಪಕ್ಷ ಸೇರಿದರು.

ತಪಸ್ ರಾಯ್
ಪಶ್ಚಿಮ ಬಂಗಾಳ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಟಿಎಂಸಿ ಹಿರಿಯ ನಾಯಕ ತಪಸ್ ರಾಯ್

ಟಿಎಂಸಿಗೆ ರಾಜೀನಾಮೆ ನೀಡುವ ಮುನ್ನ ರಾಯ್ ಅವರು, ಪಶ್ಚಿಮ ಬಂಗಾಳ ಸರ್ಕಾರ ಸಂದೇಶಖಾಲಿ ಪ್ರಕರಣವನ್ನು ನಿರ್ವಹಿಸಿದ ರೀತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com