ಖಾಲಿ ಇರುವ 30 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು: ರಾಹುಲ್ ಗಾಂಧಿ

ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ, ಖಾಲಿ ಇರುವ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮತ್ತು ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಕಾನೂನು ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಜೈಪುರ: ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ, ಖಾಲಿ ಇರುವ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮತ್ತು ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಕಾನೂನು ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ತಮ್ಮ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್ಯಾಲಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಯುವಕರಿಗೆ ಉದ್ಯೋಗದ ಹಕ್ಕು ಮತ್ತು ಶಿಷ್ಯವೇತನ ನೀಡುವುದಾಗಿ ಗುರುವಾರ ಭರವಸೆ ನೀಡಿದರು.

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ, ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಸ್ಟಾರ್ಟ್‌ಅಪ್‌ಗಳಿಗೆ 5,000 ಕೋಟಿ ರೂಪಾಯಿಗಳ ಅನುದಾನ ನೀಡುವುದಾಗಿ ಭರವಸೆ ನೀಡಿದ ಅವರು, ಕಾಂಗ್ರೆಸ್ ಉದ್ಯೋಗದ ಹಕ್ಕನ್ನು ನೀಡುತ್ತದೆ ಎಂದು ಗಾಂಧಿ ಹೇಳಿದರು.

ರಾಹುಲ್ ಗಾಂಧಿ
ಮುಚ್ಚಿರುವ ಉದ್ಯೋಗದ ಬಾಗಿಲನ್ನು ಯುವಕರಿಗೆ ಇಂಡಿಯಾ ಮೈತ್ರಿಕೂಟ ತೆರೆಯುತ್ತದೆ: ರಾಹುಲ್ ಗಾಂಧಿ

ದೇಶದ ಪ್ರತಿಯೊಬ್ಬ ಯುವ ಡಿಪ್ಲೊಮಾ ಮತ್ತು ಪದವಿ ಪಡೆದವರು ಖಾಸಗಿ ಮತ್ತು ಸರ್ಕಾರಿ ವಲಯಗಳಲ್ಲಿ ಅಪ್ರೆಂಟಿಸ್‌ಶಿಪ್ ಪಡೆಯುವ ಹಕ್ಕನ್ನು ಹೊಂದಿರುತ್ತಾರೆ. ಅವರು ಒಂದು ವರ್ಷದ ಅಪ್ರೆಂಟಿಸ್‌ಶಿಪ್ ಅನ್ನು ಪಡೆಯುತ್ತಾರೆ. ಈ ಸಮಯದಲ್ಲಿ ಅವರಿಗೆ 1 ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಮಾತನಾಡಿದ ಅವರು, 'ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಮೋದಿಜೀ ಅವುಗಳನ್ನು ಭರ್ತಿ ಮಾಡುವುದಿಲ್ಲ, ಬಿಜೆಪಿ ಅವುಗಳನ್ನು ಭರ್ತಿ ಮಾಡುವುದಿಲ್ಲ, ಅಧಿಕಾರಕ್ಕೆ ಬಂದ ನಂತರ, ಈ ಹುದ್ದೆಗಳನ್ನು ಭರ್ತಿ ಮಾಡುವುದು ನಮ್ಮ ಮೊದಲ ಹೆಜ್ಜೆಯಾಗಿದೆ ಎಂದು ತಿಳಿಸಿದರು.

ರಾಹುಲ್ ಗಾಂಧಿ
ಲೋಕಸಭೆ ಚುನಾವಣೆಗೆ ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ: ಯುಪಿ ಕಾಂಗ್ರೆಸ್ ನಾಯಕ

ಪತ್ರಿಕೆ ಸೋರಿಕೆ ವಿಚಾರವನ್ನು ಉಲ್ಲೇಖಿಸಿದ ಅವರು, ಸರ್ಕಾರಿ ನೇಮಕಾತಿ ಪರೀಕ್ಷಾ ಪ್ರಕ್ರಿಯೆಯನ್ನು ಕಾಂಗ್ರೆಸ್ ಪ್ರಮಾಣೀಕರಿಸುತ್ತದೆ ಮತ್ತು ಅದರ ಹೊರಗುತ್ತಿಗೆಯನ್ನು ನಿಲ್ಲಿಸುತ್ತದೆ ಎಂದು ಭರವಸೆ ನೀಡಿದರು.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಮಧ್ಯಪ್ರದೇಶದಿಂದ ರಾಜಸ್ಥಾನವನ್ನು ಪ್ರವೇಶಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com