ಕೇದಾರನಾಥ ದೇವಾಲಯ ಮೇ 10ರಿಂದ ಭಕ್ತರ ದರ್ಶನಕ್ಕೆ ಮುಕ್ತ

ಉಖಿಮಠದ ಓಂಕಾರೇಶ್ವರ ದೇವಸ್ಥಾನದಲ್ಲಿ ಬಿಕೆಟಿಸಿ ಅಧ್ಯಕ್ಷ ಅಜೇಂದ್ರ ಅಜಯ್ ಅವರು ಇಂದು ಕೇದಾರನಾಥ ಧಾಮ ತೆರೆಯುವ ಘೋಷಣೆ ಮಾಡಿದರು.
ಕೇದಾರನಾಥ ದೇವಾಲಯ (ಸಂಗ್ರಹ ಚಿತ್ರ)
ಕೇದಾರನಾಥ ದೇವಾಲಯ (ಸಂಗ್ರಹ ಚಿತ್ರ)
Updated on

ಕೇದಾರನಾಥ: ಮೇ 10 ರಂದು ಬೆಳಗ್ಗೆ 7 ಗಂಟೆಗೆ ಭಕ್ತರಿಗಾಗಿ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಿದೆ ಎಂದು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ(BKTC) ಶುಕ್ರವಾರ ಮಹಾಶಿವರಾತ್ರಿಯ ಸಂದರ್ಭದಲ್ಲಿ ಪ್ರಕಟಿಸಿದೆ.

ಉಖಿಮಠದ ಓಂಕಾರೇಶ್ವರ ದೇವಸ್ಥಾನದಲ್ಲಿ ಬಿಕೆಟಿಸಿ ಅಧ್ಯಕ್ಷ ಅಜೇಂದ್ರ ಅಜಯ್ ಅವರು ಇಂದು ಕೇದಾರನಾಥ ಧಾಮ ತೆರೆಯುವ ಘೋಷಣೆ ಮಾಡಿದರು.

ಪ್ರತಿ ವರ್ಷ ಲಕ್ಷಗಟ್ಟಲೆ ಜನ ಭೇಟಿ ನೀಡುವ ಹಿಮಾಲಯದ ಈ ದೇವಾಲಯದ ದ್ವಾರಗಳನ್ನು ಚಳಿಗಾಲದಲ್ಲಿ ಹಿಮದ ಕಾರಣದಿಂದಾಗಿ ಮುಚ್ಚಲಾಗುತ್ತದೆ.

ಕೇದಾರನಾಥ ದೇವಾಲಯ (ಸಂಗ್ರಹ ಚಿತ್ರ)
ಬದರಿನಾಥ್-ಕೇದಾರನಾಥ ದೇವಸ್ಥಾನಕ್ಕೆ 5 ಕೋಟಿ ರೂ. ದೇಣಿಗೆ ನೀಡಿದ ಮುಖೇಶ್ ಅಂಬಾನಿ

ಮಹಾಶಿವರಾತ್ರಿಯ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ ಅಜಯ್ ಅವರು, ಕಳೆದ ಯಾತ್ರೆಯ ಋತುವಿನಲ್ಲಿ ಕೇದಾರನಾಥ ಧಾಮಕ್ಕೆ ದಾಖಲೆಯ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದು, ಈ ವರ್ಷ ಯಾತ್ರಿಕರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದರು.

ರುದ್ರಪ್ರಯಾಗದಲ್ಲಿರುವ ಕೇದಾರನಾಥ ಧಾಮದ ಬಾಗಿಲುಗಳನ್ನು ವರ್ಷದಲ್ಲಿ 6 ತಿಂಗಳು ಮುಚ್ಚಲಾಗುತ್ತದೆ. ಇನ್ನು, 6 ತಿಂಗಳ ಕಾಲ ಉಖಿಮಠ, ಪ್ರತಿ ವರ್ಷ ಮಹಾಶಿವರಾತ್ರಿಯ ದಿನದಂದು ಬಾಗಿಲು ತೆರೆಯುವ ದಿನಾಂಕವನ್ನು ಪ್ರಕಟಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com