ಭೋಪಾಲ: ರಾಜ್ಯ ಸಚಿವಾಲಯ 'ವಲ್ಲಭ ಭವನ'ದಲ್ಲಿ ಬೆಂಕಿ ಅವಘಡ

ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿರುವ ರಾಜ್ಯ ಸಚಿವಾಲಯ ವಲ್ಲಭ ಭವನದಲ್ಲಿ ಶನಿವಾರ ಬೆಳಗ್ಗೆ ಬೃಹತ್ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದೆ.
ರಾಜ್ಯ ಸಚಿವಾಲಯದಲ್ಲಿ ಬೆಂಕಿ
ರಾಜ್ಯ ಸಚಿವಾಲಯದಲ್ಲಿ ಬೆಂಕಿ

ಭೋಪಾಲ್ : ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್​ನಲ್ಲಿರುವ ರಾಜ್ಯ ಸಚಿವಾಲಯದಲ್ಲಿ (State Secretariat) ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಚಿವಾಲಯ ಕಟ್ಟಡ ವಲ್ಲಭ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದವು.

ಮುಖ್ಯಮಂತ್ರಿ ಸೇರಿದಂತೆ ಹಲವು ಮಂದಿ ಸಚಿವರ ಕಚೇರಿಗಳೂ ಇಲ್ಲಿವೆ. ಕಟ್ಟಡದ ಐದನೇ ಮಹಡಿಯಲ್ಲಿ ಮುಖ್ಯಮಂತ್ರಿ ಕಚೇರಿ ಇದೆ. ಸದ್ಯ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

ಬೆಂಕಿ ಅವಘಡದ ಕಾರಣ ಹಲವು ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ ಎಂದು ಹೇಳಲಾಗುತ್ತಿದೆ. ಒಳಗೆ ಐದು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಇನ್ನೂ ನಡೆಯುತ್ತಿದೆ. ಸದ್ಯ ಅಗ್ನಿ ಸುರಕ್ಷತಾ ತಜ್ಞ ಪಂಕಜ್ ಖರೆ ಕೂಡ ಸ್ಥಳದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com