ಮಹಾರಾಷ್ಟ್ರ: ಬಿಜೆಪಿ ಕಾರ್ಯಕ್ರಮದಲ್ಲಿ ಕಾಲ್ತುಳಿತ, ಮಹಿಳೆ ದುರ್ಮರಣ

ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಶನಿವಾರ ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 65 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಶನಿವಾರ ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 65 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗ್ಪುರ ಬಿಜೆಪಿ ನಗರ ಘಟಕ ರೇಶಿಂಬಾಗ್ ಪ್ರದೇಶದ ಕವಿವರ್ಯ ಸುರೇಶ್ ಭಟ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಆಯೋಜಿಸಿದ್ದ ಶಿಬಿರದಲ್ಲಿ ಈ ಘಟನೆ ಸಂಭವಿಸಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಭ್ರಷ್ಟಾಚಾರಿಗಳು ಬಿಜೆಪಿ ಸೇರುತ್ತಿದ್ದಾರೆ, ಕೇಸರಿ ಪಕ್ಷ 'ವಾಷಿಂಗ್ ಮೆಷಿನ್' ಆಗಿ ಮಾರ್ಪಟ್ಟಿದೆ: ಶರದ್ ಪವಾರ್

ಮಹಾರಾಷ್ಟ್ರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಪಾತ್ರೆಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ವಿತರಿಸಲು ಶಿಬಿರ ಆಯೋಜಿಸಲಾಗಿತ್ತು. ಮುಂಜಾನೆ 5 ಗಂಟೆ ಸುಮಾರಿಗೆ ಸ್ಥಳದ ಜನರು ಹೊರಗೆ ಜಮಾಯಿಸಲು ಪ್ರಾರಂಭಿಸಿದರು ಮತ್ತು ಫಲಾನುಭವಿಗಳಿಗೆ ಗೇಟ್‌ ತೆರೆಯುವ ಹೊತ್ತಿಗೆ ಭಾರಿ ಜನಸಂದಣಿಯೇ ಉಂಟಾಯಿತು. ಗುಂಪು ಧಾವಿಸುತ್ತಿದ್ದಂತೆ ಕೆಲವು ಮಹಿಳೆಯರು ಬಿದ್ದು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಕಾಲ್ತುಳಿತದಲ್ಲಿ ಸಿಲುಕಿದ ಸಂತ್ರಸ್ತೆ ಮನುಬಾಯಿ ತುಳಶಿರಾಮ್ ರಜಪೂತ್ ಅವರನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು. ಇತರ ನಾಲ್ವರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಮಹಿಳೆಯರು ಸೇರಿದಂತೆ ಕನಿಷ್ಠ 50 ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದ್ದು, ಘಟನೆ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com