ರಾಜಸ್ಥಾನ: ಇಬ್ಬರು ಮಾಜಿ ಸಚಿವರು ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರು ಬಿಜೆಪಿಗೆ ಸೇರ್ಪಡೆ

ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ದೇಶಾದ್ಯಂತ ಪಕ್ಷಾಂತರ ಪರ್ವ ಗರಿಗೆದರಿದೆ. ರಾಜಸ್ಥಾನದಲ್ಲಿ ಮಾಜಿ ಸಚಿವರು ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು.
ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ ಸಮಾರಂಭ
ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ ಸಮಾರಂಭ
Updated on

ಜೈಪುರ: ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ದೇಶಾದ್ಯಂತ ಪಕ್ಷಾಂತರ ಪರ್ವ ಗರಿಗೆದರಿದೆ. ರಾಜಸ್ಥಾನದಲ್ಲಿ ಮಾಜಿ ಸಚಿವರು ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು.

ಮಾಜಿ ಸಚಿವರಾದ ರಾಜೇಂದ್ರ ಯಾದವ್ ಮತ್ತು ಲಾಲ್ ಚಂದ್ ಕಟಾರಿಯಾ, ಮಾಜಿ ಶಾಸಕರಾದ ರಿಚ್‌ಪಾಲ್ ಮಿರ್ಧಾ, ವಿಜಯಪಾಲ್ ಮಿರ್ಧಾ ಮತ್ತು ಖಿಲಾಡಿ ಬೈರ್ವಾ, ಮಾಜಿ ಸ್ವತಂತ್ರ ಶಾಸಕ ಅಲೋಕ್ ಬೇನಿವಾಲ್, ರಾಜ್ಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಸೇವಾದಳ ಸುರೇಶ್ ಚೌಧರಿ, ರಾಂಪಾಲ್ ಶರ್ಮಾ ಮತ್ತು ರಿಜು ಜುಂಜುನ್‌ವಾಲಾ ಸೇರಿದಂತೆ ಹಲವು ನಾಯಕರು ರಾಜ್ಯದಲ್ಲಿನ ಆಡಳಿತ ಪಕ್ಷಕ್ಕೆ ಸೇರ್ಪಡೆಯಾದರು.

ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ ಸಮಾರಂಭ
ರಾಜಸ್ಥಾನ: ಕಾಂಗ್ರೆಸ್‌ಗೆ ದೂರದೃಷ್ಟಿ ಇಲ್ಲ; ಬಿಜೆಪಿಗೆ ಸೇರ್ಪಡೆಯಾದ ಶಾಸಕ ಮಾಳವಿಯಾ

ಬಿಜೆಪಿಯ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ರಾಜ್ಯ ಬಿಜೆಪಿ ಅಧ್ಯಕ್ಷ ಸಿ ಪಿ ಜೋಶಿ ಮತ್ತು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಪಕ್ಷಕ್ಕೆ ಸ್ವಾಗತಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಕಟಾರಿಯಾ ತಮ್ಮ ಆತ್ಮಸಾಕ್ಷಿಯ ಕಾರಣದಿಂದಾಗಿ ಬಿಜೆಪಿ ಸೇರಿದ್ದೇನೆ. ರೈತರು, ಬಡವರು, ಜನಸಾಮಾನ್ಯರ ನೋವು, ನೋವು ಬಿಜೆಪಿಗೆ ಅರ್ಥವಾಗಿದೆ ಎಂದರು.

ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ ಎಸ್‌ಸಿ ಆಯೋಗದ ಅಧ್ಯಕ್ಷರಾಗಿದ್ದ ಬೈರ್ವಾ ಅವರು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ವಾಗ್ದಾಳಿ ನಡೆಸಿದರು.‘ಅಂದಿನ ಸಿಎಂ ಎಸ್‌ಸಿ ಜನರನ್ನು ತಮ್ಮ ಗುಲಾಮರಂತೆ ಪರಿಗಣಿಸಿದ್ದರು’ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com