ಹರ್ಯಾಣ: ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ 6 ಸಾವು, 6 ಮಂದಿಗೆ ಗಾಯ

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಂಡೀಗಢ: ಪಂಕ್ಚರ್ ಆಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ನಡೆದಿದೆ.

ಖಾರ್ಖರಾ ಗ್ರಾಮದ ಬಳಿ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸಾವಿಗೀಡಾಗಿದ್ದಾರೆ. ಟೈರ್ ಪಂಕ್ಚರ್ ಆಗಿದ್ದರಿಂದ ಕಾರನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು.

ಖಾರ್ಖರಾ ಗ್ರಾಮದ ಬಳಿ ಎಕ್ಸ್‌ಯುವಿಯಲ್ಲಿದ್ದವರು ತಮ್ಮ ವಾಹನದ ಟೈರ್‌ಗಳನ್ನು ಬದಲಾಯಿಸುತ್ತಿದ್ದಾಗ ಈ ಘಟನೆ ನಡೆದಿದೆ. ಹಿಂದಿನಿಂದ ಬಂದ ಮತ್ತೊಂದು ಕಾರು ಜನರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರು ಖಟೂ ಗ್ರಾಮದಿಂದ ದೆಹಲಿಗೆ ಹಿಂತಿರುಗುತ್ತಿತ್ತು.

ಸಾಂದರ್ಭಿಕ ಚಿತ್ರ
ದಾವಣಗೆರೆಯಲ್ಲಿ ಭೀಕರ ಅಪಘಾತ: ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿ, ಮೂವರ ದುರ್ಮರಣ

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರ ಮರಣೋತ್ತರ ಪರೀಕ್ಷೆ ವರದಿ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com