ವಿಪಕ್ಷ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ಸರ್ಕಾರ ಇ.ಡಿ.ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಶರದ್ ಪವಾರ್

ವಿರೋಧ ಪಕ್ಷದ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯದಂತಹ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಸೋಮವಾರ ವಾಗ್ದಾಳಿ ನಡೆಸಿದ್ದು, ಇ.ಡಿಯನ್ನು ಬಿಜೆಪಿಯ 'ಬೆಂಬಲಿತ ಪಕ್ಷ' ಎಂದು ಕರೆದಿದ್ದಾರೆ.
ಶರದ್ ಪವಾರ್
ಶರದ್ ಪವಾರ್

ಪುಣೆ: ವಿರೋಧ ಪಕ್ಷದ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯದಂತಹ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು 'ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್‌ಚಂದ್ರ ಪವಾರ್' (ಎನ್‌ಸಿಪಿ (ಎಸ್‌ಪಿ)) ಮುಖ್ಯಸ್ಥ ಶರದ್ ಪವಾರ್ ಸೋಮವಾರ ವಾಗ್ದಾಳಿ ನಡೆಸಿದ್ದು, ಇ.ಡಿಯನ್ನು ಬಿಜೆಪಿಯ 'ಬೆಂಬಲಿತ ಪಕ್ಷ' ಎಂದು ಕರೆದಿದ್ದಾರೆ.

ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2005 ಮತ್ತು 2023ರ ನಡುವಿನ ಇ.ಡಿ ಕ್ರಮಗಳ ಅಂಕಿಅಂಶಗಳನ್ನು ಉಲ್ಲೇಖಿಸಿ, ಅದು ಈ ಅವಧಿಯಲ್ಲಿ 5,806 ಪ್ರಕರಣಗಳನ್ನು ದಾಖಲಿಸಿದೆ ಮತ್ತು ಅವುಗಳಲ್ಲಿ 25 ಮಾತ್ರ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

'ಪ್ರಕರಣಗಳ ವಿಲೇವಾರಿ ದರವು ಶೇ 0.42 ಮತ್ತು ಶಿಕ್ಷೆಯ ಪ್ರಮಾಣವು ಕೇವಲ ಶೇ 0.40 ರಷ್ಟು ಆಗಿದೆ. ಇ.ಡಿಯ ಬಜೆಟ್ 2022ರಲ್ಲಿ 300 ಕೋಟಿ ರೂ.ಗಳಷ್ಟಿತ್ತು. ನಂತರ 404 ಕೋಟಿ ರೂ.ಗಳಿಗೆ ಏರಿದೆ ಎಂದರು.

ಶರದ್ ಪವಾರ್
ಶರದ್ ಪವಾರ್ ಮೊಮ್ಮಗನ ಸಕ್ಕರೆ ಕಾರ್ಖಾನೆ ಜಪ್ತಿ ಮಾಡಿದ ಇಡಿ

2005 ಮತ್ತು 2023ರ ನಡುವೆ ಯುಪಿಎ ಸೇರಿದಂತೆ ಎರಡು ಸರ್ಕಾರಗಳು ಅಧಿಕಾರದಲ್ಲಿದ್ದವು. ಯುಪಿಎ ಆಡಳಿತದಲ್ಲಿ ಇ.ಡಿ 26 ನಾಯಕರನ್ನು ತನಿಖೆ ಮಾಡಿದೆ. ಅವರಲ್ಲಿ ಐವರು ಕಾಂಗ್ರೆಸ್ ಮತ್ತು ಮೂವರು ಬಿಜೆಪಿ ನಾಯಕರಾಗಿದ್ದಾರೆ. ಯುಪಿಎ ಆಡಳಿತದ ಅವಧಿಯಲ್ಲಿ ಇ.ಡಿ ಕ್ರಮವು ರಾಜಕೀಯ ಪ್ರೇರಿತವಾಗಿರಲಿಲ್ಲ. ಆದರೆ, 2014ರ ನಂತರ ಒಬ್ಬನೇ ಒಬ್ಬ ಬಿಜೆಪಿ ನಾಯಕನನ್ನು ವಿಚಾರಣೆಗೆ ಒಳಪಡಿಸಿಲ್ಲ' ಎಂದು ಪವಾರ್ ಹೇಳಿದರು.

ಈ ಅಂಕಿಅಂಶಗಳು ಬಿಜೆಪಿ ಸರ್ಕಾರದ ಅಡಿಯಲ್ಲಿ ಇ.ಡಿ ಕ್ರಮಗಳು ರಾಜಕೀಯ ಪ್ರೇರಿತವಾಗಿವೆ ಎಂಬ ಅನುಮಾನವನ್ನು ಹುಟ್ಟುಹಾಕುತ್ತವೆ. ಇ.ಡಿಯು ಬಿಜೆಪಿಯ ಬೆಂಬಲಿಗ ಪಕ್ಷವಾಗಿ ಮಾರ್ಪಟ್ಟಿರುವುದನ್ನು ಇದು ಸೂಚಿಸುತ್ತದೆ. ಇ.ಡಿ ಕ್ರಮಗಳ ಬಗ್ಗೆ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿರುತ್ತದೆ. ಬಿಜೆಪಿಯಿಂದ ಆದೇಶ ಬಂದಂತೆ ತೋರುತ್ತಿದೆ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಇ.ಡಿ ದುರ್ಬಳಕೆಯಾಗಿರಲಿಲ್ಲ, ಆದರೆ ಈಗ ಪ್ರತಿಪಕ್ಷ ನಾಯಕರಲ್ಲಿ ಭಯ ಮೂಡಿಸಲು ತನಿಖಾ ಸಂಸ್ಥೆಯನ್ನು ಬಳಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಶರದ್ ಪವಾರ್
ಭ್ರಷ್ಟಾಚಾರಿಗಳು ಬಿಜೆಪಿ ಸೇರುತ್ತಿದ್ದಾರೆ, ಕೇಸರಿ ಪಕ್ಷ 'ವಾಷಿಂಗ್ ಮೆಷಿನ್' ಆಗಿ ಮಾರ್ಪಟ್ಟಿದೆ: ಶರದ್ ಪವಾರ್

ಶರದ್ ಪವಾರ್ ಅವರ ಮೊಮ್ಮಗನಾಗಿರುವ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್ ಅವರ ಒಡೆತನದ ಸಕ್ಕರೆ ಕಾರ್ಖಾನೆಯ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com