ಮಾರ್ಚ್ 14ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ: ಹೊಸ ಚುನಾವಣಾ ಆಯುಕ್ತರ ಆಯ್ಕೆ

ಚುನಾವಣಾ ಆಯುಕ್ತರ ಆಯ್ಕೆಗಾಗಿ ಉನ್ನತಾಧಿಕಾರ ಸಮಿತಿ ಸಭೆಯನ್ನು ಇದೇ ಮಾರ್ಚ್ 14 ರಂದು ಕರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಚುನಾವಣಾ ಆಯೋಗ
ಚುನಾವಣಾ ಆಯೋಗ
Updated on

ನವದೆಹಲಿ: ಚುನಾವಣಾ ಆಯುಕ್ತರ ಆಯ್ಕೆಗಾಗಿ ಉನ್ನತಾಧಿಕಾರ ಸಮಿತಿ ಸಭೆಯನ್ನು ಇದೇ ಮಾರ್ಚ್ 14 ರಂದು ಕರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಇತ್ತೀಚಿನ ನಿವೃತ್ತಿ ಮತ್ತು ರಾಜೀನಾಮೆಗಳಿಂದ ತೆರವಾದ ಎರಡು ಚುನಾವಣಾ ಆಯುಕ್ತರ ಹುದ್ದೆಗಳ ನೇಮಕಾತಿಗಳನ್ನು ಚರ್ಚಿಸಿ ಅಂತಿಮ ಅನುಮೋದನೆ ನೀಡಲಿದ್ದಾರೆ.

ಕಳೆದ ಶುಕ್ರವಾರ ರಾಜೀನಾಮೆ ನೀಡಿದ ಅರುಣ್ ಗೋಯೆಲ್ ಮತ್ತು ಫೆಬ್ರವರಿ 14 ರಂದು ನಿವೃತ್ತರಾದ ಅನುಪ್ ಚಂದ್ರ ಪಾಂಡೆ ನಂತರ ಕೇಂದ್ರ ಚುನಾವಣಾ ಆಯೋಗ ಈಗ ಒಬ್ಬ ಮುಖ್ಯಸ್ಥರೊಂದಿಗೆ ಕಾರ್ಯನಿರ್ವಹಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಕೇಂದ್ರ ಸಚಿವರು ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸದಸ್ಯರಾಗಿದ್ದಾರೆ. ಸಮಿತಿಯಿಂದ ಶಿಫಾರಸುಗಳನ್ನು ಸ್ವೀಕರಿಸಿದ ನಂತರ, ಭಾರತದ ರಾಷ್ಟ್ರಪತಿಗಳು ಹೊಸ ಚುನಾವಣಾ ಆಯುಕ್ತರನ್ನು ನೇಮಿಸುತ್ತಾರೆ.

ಕಳೆದ ಶನಿವಾರ ಮಧ್ಯಾಹ್ನ ಒಬ್ಬ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸೂಚನೆಯನ್ನು ಆರಂಭದಲ್ಲಿ ಕಳುಹಿಸಲಾಗಿದೆ ಎಂದು ಬಹಿರಂಗಪಡಿಸಲಾಯಿತು, ಗೋಯೆಲ್ ಅವರ ರಾಜೀನಾಮೆಯನ್ನು ಸಂಜೆ ಔಪಚಾರಿಕವಾಗಿ ಘೋಷಿಸಲಾಯಿತು. ಸೋಮವಾರ ಸಂಜೆ ಇಬ್ಬರು ಚುನಾವಣಾ ಆಯುಕ್ತರ ಆಯ್ಕೆಗೆ ಪರಿಷ್ಕೃತ ಅಧಿಸೂಚನೆಯನ್ನು ಕಾನೂನು ಸಚಿವಾಲಯ ಹೊರಡಿಸಿದೆ.

ಚುನಾವಣಾ ಆಯೋಗ
ಹೊಸ ಚುನಾವಣಾ ಆಯುಕ್ತರ ನೇಮಕ ಮಾಡದಂತೆ ಕೇಂದ್ರಕ್ಕೆ ತಡೆಯಾಜ್ಞೆ ನೀಡಿ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಪ್ರಸ್ತುತ, ಸಿಇಸಿ ರಾಜೀವ್ ಕುಮಾರ್ ಅವರು ಚುನಾವಣಾ ಸಂಸ್ಥೆಯನ್ನು ಮುನ್ನಡೆಸುವ ಏಕೈಕ ಸದಸ್ಯರಾಗಿದ್ದಾರೆ. ಗಮನಾರ್ಹವೆಂದರೆ, ಇನ್ನೊಬ್ಬ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಕೆಲವು ನಿರ್ಧಾರಗಳೊಂದಿಗೆ ಭಿನ್ನಾಭಿಪ್ರಾಯಗಳನ್ನು ಉಲ್ಲೇಖಿಸಿ ಆಗಸ್ಟ್ 2020 ರಲ್ಲಿ ಚುನಾವಣಾ ಆಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com