ಎಐಎಡಿಎಂಕೆ ಮುಖ್ಯಸ್ಥ ಪಳನಿಸ್ವಾಮಿ, ಬಿಜೆಪಿಯ ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಸೆಷನ್ಸ್ ನ್ಯಾಯಾಲಯದಲ್ಲಿ ಗುರುವಾರ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಎಡಪ್ಪಾಡಿ ಕೆ ಪಳನಿಸ್ವಾಮಿ - ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ
ಎಡಪ್ಪಾಡಿ ಕೆ ಪಳನಿಸ್ವಾಮಿ - ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರುದ್ಧ ಡ್ರಗ್ಸ್ ವಿತರಣೆ ಆರೋಪಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಸೆಷನ್ಸ್ ನ್ಯಾಯಾಲಯದಲ್ಲಿ ಗುರುವಾರ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಇಂದು ಪ್ರತ್ಯೇಕವಾಗಿ ಸಲ್ಲಿಸಿದ ದೂರುಗಳಲ್ಲಿ ಸಿಟಿ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ದೇವರಾಜನ್ ಅವರು ಕಲಂ 499 ಮತ್ತು 500 ಐಪಿಸಿ(ಮಾನನಷ್ಟ) ಅಡಿಯಲ್ಲಿ ಈ ಇಬ್ಬರು ನಾಯಕರನ್ನು ಶಿಕ್ಷಿಸುವಂತೆ ಕೋರಿದ್ದಾರೆ.

ರಾಜ್ಯ ವಿರೋಧ ಪಕ್ಷದ ನಾಯಕ ಪಳನಿಸ್ವಾಮಿ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಅವರ ಪ್ರತಿಷ್ಠೆಗೆ ಧಕ್ಕೆ ತರಲು ಉದ್ದೇಶಿಸಲಾಗಿದೆ ಎಂದು ದೇವರಾಜನ್ ಆರೋಪಿಸಿದ್ದಾರೆ.

ಎಡಪ್ಪಾಡಿ ಕೆ ಪಳನಿಸ್ವಾಮಿ - ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ
'ಒಂದು ರಾಷ್ಟ್ರ ಒಂದು ಚುನಾವಣೆ', ಡಿಲಿಮಿಟೇಶನ್ ವಿರುದ್ಧ ನಿರ್ಣಯ ಮಂಡಿಸಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ 

‘ಮಾದಕ ಮುಕ್ತ ತಮಿಳುನಾಡು’ ಎಂಬ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಲವು ಕ್ರಮಗಳನ್ನು ಕೈಗೊಂಡಿರುವ ಸಂದರ್ಭದಲ್ಲಿ, ಪಳನಿಸ್ವಾಮಿ ಮತ್ತು ಅಣ್ಣಾಮಲೈ ಅವರ ಮಾನಹಾನಿಕರ ಹೇಳಿಕೆಯು ಮಾದಕ ದ್ರವ್ಯ ದಂಧೆಕೋರರಿಗೆ ನೆರವು ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com