ಆಂಧ್ರ ಪ್ರದೇಶ ಅಸೆಂಬ್ಲಿ ಚುನಾವಣೆ: ಪೀಠಾಪುರಂ ಕ್ಷೇತ್ರದಲ್ಲಿ ನಟ ಪವನ್ ಕಲ್ಯಾಣ್ ವಿರುದ್ಧ ಆರ್ ಜಿವಿ ಸ್ಪರ್ಧೆ

ಮುಂಬರುವ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಗುರುವಾರ ಘೋಷಿಸಿದ್ದಾರೆ.
ಆರ್ ಜಿವಿ, ಪವನ್ ಕಲ್ಯಾಣ್
ಆರ್ ಜಿವಿ, ಪವನ್ ಕಲ್ಯಾಣ್
Updated on

ಹೈದರಾಬಾದ್: ಮುಂಬರುವ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಗುರುವಾರ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಆರ್ ಜಿವಿ, ಪೀಠಾಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ ಎಂದು ತಿಳಿಸಲು ಹರ್ಷಿಸುತ್ತೇನೆ. ಇದು ದಿಢೀರ್ ನಿರ್ಧಾರ ಎಂದಿದ್ದಾರೆ.

ಅಂದಹಾಗೆ ಪೀಠಾಪುರಂ ಕ್ಷೇತ್ರದಿಂದ ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಟ ಪವನ್ ಕಲ್ಯಾಣ್ ಸ್ಪರ್ಧೆಯ ವಿಚಾರ ಪ್ರಕಟವಾಗುತ್ತಿದ್ದಂತೆಯೇ ರಾಮ್ ಗೋಪಾಲ್ ವರ್ಮಾ ಈ ನಿರ್ಧಾರ ಪ್ರಕಟಿಸಿರುವುದು ಗಮನಾರ್ಹವಾಗಿದೆ.

ಆರ್ ಜಿವಿ, ಪವನ್ ಕಲ್ಯಾಣ್
ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆ: ಪೀಠಾಪುರಂನಿಂದ ನಟ ಪವನ್ ಕಲ್ಯಾಣ್ ಕಣಕ್ಕೆ

ಕಳೆದ ವರ್ಷ ಬಿಡುಗಡೆಗೊಂಡಿದ್ದ ರಾಮ್ ಗೋಪಾಲ್ ವರ್ಮಾ ನಿರ್ದೇಶದ ವ್ಯೊಹಂ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೇ ವಿಚಾರವಾಗಿ ಹೈದ್ರಾಬಾದ್ ನಲ್ಲಿರುವ ತಮ್ಮ ಕಚೇರಿ ಮುಂದೆ ನಡೆದಿದ್ದ ಪ್ರತಿಭಟನೆ ಸಂಬಂಧ ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು, ಪುತ್ರ ನಾರಾ ಲೋಕೇಶ್ ಹಾಗೂ ಪವನ್ ಕಲ್ಯಾಣ್ ವಿರುದ್ಧ ಆರ್ ಜಿವಿ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com