CAA: ಪೌರತ್ವ ತಿದ್ದುಪಡಿ ನಿಯಮಗಳ ಅನುಷ್ಠಾನ ತಡೆ ಕೋರಿ ಅರ್ಜಿ, ಮಾರ್ಚ್ 19ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಪುರಸ್ಕರಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: 2019 ರ ಪೌರತ್ವ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದ್ದು ಅವುಗಳ ವಿಚಾರಣೆ ಮುಗಿಯುವವರೆಗೆ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಮಸೂದೆ 2024ನ್ನು ಜಾರಿಗೆ ತರದಂತೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಪುರಸ್ಕರಿಸಿತು. ವಲಸಿಗ ಹಿಂದೂಗಳಿಗೆ ಒಂದು ಬಾರಿ ದೇಶದ ಪೌರತ್ವವನ್ನು ನೀಡಿದ ನಂತರ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ, ಹೀಗಾಗಿ ಈ ಸಮಸ್ಯೆ ಕುರಿತು ತುರ್ತು ವಿಚಾರಣೆ ಅಗತ್ಯವಿದೆ ಎಂದು ಅರ್ಜಿಯಲ್ಲಿ ವಾದಿಸಿದ್ದಾರೆ.

ಈ ಅರ್ಜಿ ವಿಚಾರಣೆಯನ್ನು ನಾವು ಮಾರ್ಚ್ 19, ಮಂಗಳವಾರ ನಡೆಸುತ್ತೇವೆ. 190ಕ್ಕೂ ಹೆಚ್ಚು ಪ್ರಕರಣಗಳಿವೆ. ಎಲ್ಲವನ್ನೂ ವಿಚಾರಣೆ ನಡೆಸುತ್ತೇವೆ. ನಾವು ಮಧ್ಯಂತರ ಅರ್ಜಿಗಳೊಂದಿಗೆ ಪೂರ್ಣ ಸಂಗ್ರಹವನ್ನು ಮುಂದಿಡುತ್ತೇವೆ ಎಂದು ಸಿಜೆಐ ಹೇಳಿದರು.

ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, 237 ಅರ್ಜಿಗಳಿದ್ದು, ಬಾಕಿ ಉಳಿದಿರುವ ಅರ್ಜಿಗಳಲ್ಲಿ ನಿಯಮಗಳ ಅನುಷ್ಠಾನದ ವಿರುದ್ಧ ನಾಲ್ಕು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್
ಮಸೂದೆ ಅಂಗೀಕಾರವಾದ ನಾಲ್ಕು ವರ್ಷಗಳ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ

ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ತ್ವರಿತವಾಗಿ ನೀಡಲು ಸಂಸತ್ತು ವಿವಾದಾತ್ಮಕ ಕಾನೂನನ್ನು ಅಂಗೀಕರಿಸಿದ ನಾಲ್ಕು ವರ್ಷಗಳ ನಂತರ ನಿಯಮಗಳನ್ನು ತಿಳಿಸುವ ಮೂಲಕ ಕೇಂದ್ರವು ಪೌರತ್ವ (ತಿದ್ದುಪಡಿ) ಕಾಯ್ದೆ, 2019 ನ್ನು ಜಾರಿಗೊಳಿಸಿದ ನಂತರ ಅರ್ಜಿಗಳನ್ನು ಸಲ್ಲಿಸಲಾಗಿದೆ.

ಪೌರತ್ವ ಕಾನೂನನ್ನು ಪ್ರಶ್ನಿಸಿದ ಅರ್ಜಿದಾರರಲ್ಲಿ ಒಬ್ಬರಾದ ಐಯುಎಂಎಲ್ ಸಲ್ಲಿಸಿದ ಅರ್ಜಿಯು, ರಿಟ್ ಅರ್ಜಿಗಳ ತೀರ್ಪು ಬಾಕಿ ಉಳಿದಿರುವ ಮುಸ್ಲಿಂ ಸಮುದಾಯಕ್ಕೆ ಸೇರಿದ ಜನರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ನೋಡಿಕೊಳ್ಳಲು ನ್ಯಾಯಾಲಯದ ನಿರ್ದೇಶನವನ್ನು ಕೋರಿದೆ.

ಸಿಎಎ ಅಡಿಯಲ್ಲಿ ಮುಸ್ಲಿಂ ಧರ್ಮಕ್ಕೆ ಸೇರಿದವರು ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com