ಚುನಾವಣಾ ಆಯೋಗ ಯಾವಾಗಲೂ ಪಾರದರ್ಶಕತೆಯ ಪರವಾಗಿದೆ: ಚುನಾವಣಾ ಬಾಂಡ್ ಬಗ್ಗೆ ರಾಜೀವ್ ಕುಮಾರ್

ರಾಜಕೀಯ ಪಕ್ಷಗಳ ನಿಧಿಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳುವ ಬಗ್ಗೆ ಚುನಾವಣಾ ಆಯೋಗಕ್ಕೆ ಒಲವು ಇದೆ.
ಚುನಾವಣಾ ಬಾಂಡ್ (ಸಾಂಕೇತಿಕ ಚಿತ್ರ)
ಚುನಾವಣಾ ಬಾಂಡ್ (ಸಾಂಕೇತಿಕ ಚಿತ್ರ)
Updated on

ನವದೆಹಲಿ: ರಾಜಕೀಯ ಪಕ್ಷಗಳ ನಿಧಿಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳುವ ಬಗ್ಗೆ ಚುನಾವಣಾ ಆಯೋಗಕ್ಕೆ ಒಲವು ಇದೆ. ಆದರೆ ಪಕ್ಷಗಳಿಗೆ ಹಣ ನೀಡುವವರಿಗೆ ಕಿರುಕುಳ ನೀಡಬಾರದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳನ್ನು ನಿಷೇಧಿಸಿದ ಬಗ್ಗೆ ಪ್ರತಿಕ್ರಿಯಿಸಿದ ರಾಜೀವ್ ಕುಮಾರ್ ಅವರು, ಪ್ರಜಾಪ್ರಭುತ್ವದಲ್ಲಿ ವಿಷಯಗಳನ್ನು ಮುಚ್ಚಿಡಲು ಅವಕಾಶ ಇಲ್ಲ ಎಂದರು.

ರಾಜಕೀಯ ಪಕ್ಷಗಳು ತಮಗೆ ನೀಡುವ ದೇಣಿಗೆಯನ್ನು ಗೌಪ್ಯವಾಗಿಡುವುದನ್ನು ತಾವು ಬೆಂಬಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಚುನಾವಣಾ ಬಾಂಡ್ (ಸಾಂಕೇತಿಕ ಚಿತ್ರ)
'ಲೋಕ'ಸಮರಕ್ಕೆ ಮುಹೂರ್ತ ಫಿಕ್ಸ್: ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಚುನಾವಣೆ, ರಾಜ್ಯದಲ್ಲಿ ಏ.26, ಮೇ 7 ರಂದು ಮತದಾನ

"ಲೆಕ್ಕ ಇಲ್ಲದ ದೇಣಿಗೆಯನ್ನು ನಾವು ಹೇಗೆ ನಿಯಂತ್ರಿಸಬೇಕು ಎಂಬುದರ ಬಗ್ಗೆ ಇಡೀ ದೇಶ ವಿಚಾರ ಮಾಡಬೇಕಾಗಿದೆ" ಎಂದು ರಾಜೀವ್ ಕುಮಾರ್ ಹೇಳಿದ್ದಾರೆ. ಚುನಾವಣಾ ಬಾಂಡ್‌ಗಳನ್ನು ಕಾನೂನುಬಾಹಿರಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

2017 ರಲ್ಲಿ ಮೋದಿ ಸರ್ಕಾರ ಈ ಚುನಾವಣಾ ಬಾಂಡ್‌ಗಳನ್ನು ಕಂಪನಿಗಳು 'ಕಪ್ಪುಹಣ'ದ ಬದಲಾಗಿ ವೈಟ್ ಮನಿಯನ್ನೇ ರಾಜಕೀಯ ಪಕ್ಷಗಳಿಗೆ ಕಳುಹಿಸುವ ಮಾರ್ಗವಾಗಿ ಪರಿಚಯಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com