ಆಯೋಗದಲ್ಲಿ ಭಿನ್ನಮತದ ಬಗ್ಗೆ ಗೋಯೆಲ್ ದಿಢೀರ್ ರಾಜೀನಾಮೆ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಿಷ್ಟು...

ಲೋಕಸಭಾ ಚುನಾವಣೆ 2024 ಕ್ಕೆ ದಿನಾಂಕ ಪ್ರಕಟಿಸಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ದಿಢೀರ್ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್online desk
Updated on

ನವದೆಹಲಿ: ಲೋಕಸಭಾ ಚುನಾವಣೆ 2024 ಕ್ಕೆ ದಿನಾಂಕ ಪ್ರಕಟಿಸಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ದಿಢೀರ್ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಪ್ರಶ್ನೆಗೆ ನೇರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ರಾಜೀವ್ ಕುಮಾರ್, ಅವರ ವೈಯಕ್ತಿಕ ನಿರ್ಧಾರವನ್ನು ಗೌರವಿಸಬೇಕು ಎಂದಷ್ಟೇ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್
ಇವಿಎಂ ನೂರಕ್ಕೆ ನೂರು ಸುರಕ್ಷಿತ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಲು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್, ಚುನಾವಣಾ ಸಮಿತಿಯಲ್ಲಿ ಭಿನ್ನಾಭಿಪ್ರಾಯವನ್ನು ಪ್ರೋತ್ಸಾಹಿಸಲಾಗುತ್ತದೆ ಎಂದು ಹೇಳಿದರು. 2027 ವರೆಗೂ ಸೇವಾ ಅವಧಿ ಇದ್ದ ಗೋಯಲ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದರು. ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ರಾಜೀವ್ ಕುಮಾರ್, ಅರುಣ್ ಗೋಯಲ್ ನಮ್ಮ ತಂಡದ ಅತ್ಯಂತ ಪ್ರತಿಷ್ಠಿತ ಸದಸ್ಯರಾಗಿದ್ದರು. ನಾನು ಅವನೊಂದಿಗೆ ಕೆಲಸ ಮಾಡುವುದನ್ನು ಸಂಪೂರ್ಣವಾಗಿ ಆನಂದಿಸಿದೆ, ಆದರೆ ಪ್ರತಿ ಸಂಸ್ಥೆಯಲ್ಲಿ ಯಾರಿಗಾದರೂ ವೈಯಕ್ತಿಕ ಸ್ಥಳವನ್ನು ನೀಡಬೇಕಾಗುತ್ತದೆ ಮತ್ತು ವೈಯಕ್ತಿಕ ನಿರ್ಧಾರಗಳನ್ನು ಮುಟ್ಟಬಾರದು ಎಂಬ ಬಗ್ಗೆ ನನಗೆ ಖಾತ್ರಿಯಿದೆ, ವೈಯಕ್ತಿಕ ಪ್ರಶ್ನೆಗಳನ್ನು ಕೇಳುವಷ್ಟು ಸಂವೇದನಾರಹಿತರಾಗಿರಬಾರದು ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

"ಅವರು ರಾಜೀನಾಮೆ ನೀಡಲು ವೈಯಕ್ತಿಕ ಕಾರಣಗಳನ್ನು ಹೊಂದಿದ್ದರೆ ಅದನ್ನು ನಾವು ಗೌರವಿಸಬೇಕು" ಎಂದು ರಾಜೀವ್ ಕುಮಾರ್ ಹೇಳಿದ್ದಾರೆ. ರಾಜೀವ್ ಕುಮಾರ್ ಅವರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಗೋಯೆಲ್ ರಾಜೀನಾಮೆ ನೀಡಿದ್ದಾರೆ ಎಂಬ ಊಹಾಪೋಹಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com