ಕರ್ಮ ನಿಮ್ಮನ್ನು ಸುತ್ತಿಕೊಳ್ಳುತ್ತೆ: ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಶರ್ಮಿಷ್ಠ ಮುಖರ್ಜಿ ಪ್ರತಿಕ್ರಿಯೆ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಮಗಳು ಶರ್ಮಿಷ್ಠಾ ಮುಖರ್ಜಿ ಮಾಡಿರುವ ಟ್ವೀಟ್ ಮಾಡಿದ್ದಾರೆ.
ಶರ್ಮಿಷ್ಠ ಮುಖರ್ಜಿ
ಶರ್ಮಿಷ್ಠ ಮುಖರ್ಜಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಮಗಳು ಶರ್ಮಿಷ್ಠಾ ಮುಖರ್ಜಿ ಮಾಡಿರುವ ಟ್ವೀಟ್ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಹಾಗೂ ಅಣ್ಣಾ ಹಜಾರೆ ಅವರು ಆಗಿನ ದೆಹಲಿ ಸಿಎಂ ಮತ್ತು ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರ ವಿರುದ್ಧ ಬೇಜವಾಬ್ದಾರಿಯುತ, ಆಧಾರರಹಿತ ಆರೋಪಗಳನ್ನು ಮಾಡಿದ್ದರು. ಅದಕ್ಕೆ ತಕ್ಕ ಪ್ರತಿಫಲ ಎದುರಿಸಿದ್ದಾರೆ ಎಂದು ಶರ್ಮಿಷ್ಠಾ ಹೇಳಿದ್ದಾರೆ.

ಕಾಂಗ್ರೆಸ್‌ನ ಶೀಲಾ ದೀಕ್ಷಿತ್‌ ಅವರು ದೆಹಲಿ ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ಅರವಿಂದ್‌ ಕೇಜ್ರಿವಾಲ್‌ ಹಾಗೂ ಅಣ್ಣಾ ಹಜಾರೆ ಅವರ ತಂಡವು ಹುರುಳಿಲ್ಲದ ಆರೋಪ ಮಾಡಿತು. ಬೇಜವಾಬ್ದಾರಿಯುತ, ಯಾವುದೇ ಸಾಕ್ಷ್ಯಾಧಾರಗಳು ಇಲ್ಲದ ಆರೋಪಗಳನ್ನು ಇವರೆಲ್ಲ ಮಾಡಿದರು. ಶೀಲಾ ದೀಕ್ಷಿತ್‌ ಅವರ ವಿರುದ್ಧ ಟ್ರಂಕ್‌ಗಟ್ಟಲೆ ಸಾಕ್ಷ್ಯಾಧಾರಗಳು ಇವೆ ಎಂದು ಇವರು ಹೇಳಿದ್ದರು.

ಶರ್ಮಿಷ್ಠ ಮುಖರ್ಜಿ
ಗೃಹಬಂಧನದಲ್ಲಿ ಅರವಿಂದ್ ಕೇಜ್ರಿವಾಲ್ ಕುಟುಂಬ: ಎಎಪಿ

ಆದರೆ, ಒಂದೇ ಒಂದು ದಾಖಲೆಯನ್ನೂ ಇವರು ಬಹಿರಂಗಪಡಿಸಲಿಲ್ಲ. ಆದರೆ, ಕರ್ಮದ ಪ್ರತಿಫಲದಿಂದಾಗಿ ಇಂದು ಅರವಿಂದ್‌ ಕೇಜ್ರಿವಾಲ್‌ ಅವರು ಜೈಲುಪಾಲಾಗಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com