ಕಾಸಿಗಾಗಿ ಪ್ರಶ್ನೆ ಪ್ರಕರಣ: TMC ಸಂಸದೆ ಮಹುವಾ ಮೊಯಿತ್ರಾ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ

ಕಾಸಿಗಾಗಿ ಪ್ರಶ್ನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರ ಕಚೇರಿ ಮತ್ತು ನಿವಾಸಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
Updated on

ನವದೆಹಲಿ: ಕಾಸಿಗಾಗಿ ಪ್ರಶ್ನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರ ಕಚೇರಿ ಮತ್ತು ನಿವಾಸಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಕಾಸಿಗಾಗಿ ಪ್ರಶ್ನೆ ಪ್ರಕರಣ ಸಂಬಂಧ ಲೋಕಪಾಲ್‌ ನಿರ್ದೇಶನದ ಮೇಲೆ ಸಿಬಿಐ, ಮಹುವಾ ಮೊಯಿತ್ರಾ ವಿರುದ್ಧ ಶುಕ್ರವಾರ ಎಫ್‌ಐಆರ್‌ ದಾಖಲಿಸಿತ್ತು. ಶನಿವಾರ ಬೆಳಗ್ಗೆ ಮಹುವಾ ಮೊಯಿತ್ರಾ ಅವರ ಕೋಲ್ಕತ್ತ ನಿವಾಸ, ಕಚೇರಿ ಸೇರಿದಂತೆ ದೆಹಲಿ ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಸಿಬಿಐ ಮೂಲಗಳ ತಿಳಿಸಿವೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
ಮಹುವಾ ಮೊಯಿತ್ರಾಗೆ ಹೆಚ್ಚಿದ ಸಂಕಷ್ಟ: 'ಪ್ರಶ್ನೆಗಾಗಿ ಕಾಸು' ಪ್ರಕರಣದ ಸಿಬಿಐ ತನಿಖೆಗೆ ಲೋಕಪಾಲ್ ಆದೇಶ

6 ತಿಂಗಳೊಳಗೆ ವರದಿ ನೀಡುವಂತೆ ಲೋಕಪಾಲ್ ಸೂಚನೆ

ಇನ್ನು ಈ ಪ್ರಕರಣವನ್ನು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ, ಆರು ತಿಂಗಳೊಳಗೆ ವರದಿ ನೀಡಬೇಕು ಹಾಗೂ ತನಿಖೆಯ ಪ್ರಗತಿ ಬಗ್ಗೆ ಮಾಸಿಕ ವರದಿಯನ್ನು ನೀಡಬೇಕು ಎಂದು ಲೋಕಪಾಲ್‌ ಸಿಬಿಐಗೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್ ಅದಾನಿ ವಿರುದ್ಧ ಮಾತನಾಡಲು ಮಹುವಾ ಮೊಯಿತ್ರಾ ಅವರು ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದಾನಿಯಿಂದ ಹಣ ಹಾಗೂ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ್ದ ಸದನದ ನೀತಿ ಸಮಿತಿ, ಮಹುವಾ ಮೋಯಿತ್ರಾ ಅವರನ್ನು ಉಚ್ಚಾಟಿಸಬೇಕು ಎಂದು ವರದಿ ನೀಡಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಈ ಲೋಕಸಭೆ ಚುನಾವಣೆಗೆ ಕೃಷ್ಣನಗರ ಕ್ಷೇತ್ರದಿಂದ ಮತ್ತೆ ಮಹುವಾ ಅವರಿಗೆ ಟಿಎಂಸಿ ಟಿಕೆಟ್ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com