ನವದೆಹಲಿ: ಕೈಗಾರಿಕೋದ್ಯಮಿ ಹಾಗೂ ಮಾಜಿ ಸಂಸದ ನವೀನ್ ಜಿಂದಾಲ್ ಕಾಂಗ್ರೆಸ್ ತೊರೆದು ಇಂದು ಬಿಜೆಪಿ ಸೇರ್ಪಡೆಯಾದರು. ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ್ ಭಾರತದ ಉದ್ದೇಶಕ್ಕಾಗಿ ಕೊಡುಗೆ ನೀಡಬಯಸುವುದಾಗಿ ಜಿಂದಾಲ್ ಹೇಳಿದ್ದಾರೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ತಾವ್ಡೆ ನೇತೃತ್ವದಲ್ಲಿ ನವೀನ್ ಜಿಂದಾಲ್ ಬಿಜೆಪಿಗೆ ಸೇರ್ಪಡೆಯಾದರು. ವಿನೋದ್ ತಾವ್ಡೆ ಮಾತನಾಡಿ ನವೀನ್ ಜಿಂದಾಲ್ ಸೇರ್ಪಡೆಯಿಂದ ದೇಶದ ಆರ್ಥಿಕತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸುವುದಕ್ಕೆ ನೆರವಾಗಲಿದೆ ಎಂದು ಹೇಳಿದ್ದಾರೆ. 2004 ರಲ್ಲಿ ಜಿಂದಾಲ್ ಕುರುಕ್ಷೇತ್ರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನವೀನ್ ಜಿಂದಾಲ್ ಕುರುಕ್ಷೇತ್ರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಲಿದ್ದಾರೆ.
Advertisement