ಇಡಿ ಕಸ್ಟಡಿಯಿಂದ ಮತ್ತೊಂದು ಆದೇಶ ಹೊರಡಿಸಿದ ಕೇಜ್ರಿವಾಲ್!

ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಚಿಕಿತ್ಸಾಲಯಗಳಲ್ಲಿ ಜನರಿಗೆ ಔಷಧಿಗಳು ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಆದೇಶ ಹೊರಡಿಸಿದ್ದಾರೆ ಎಂದು ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಮಂಗಳವಾರ ತಿಳಿಸಿದ್ದಾರೆ.
ದೆಹಲಿ ಸಿಎಂ ಕೇಜ್ರಿವಾಲ್
ದೆಹಲಿ ಸಿಎಂ ಕೇಜ್ರಿವಾಲ್
Updated on

ನವದೆಹಲಿ: ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಚಿಕಿತ್ಸಾಲಯಗಳಲ್ಲಿ ಜನರಿಗೆ ಔಷಧಿಗಳು ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಆದೇಶ ಹೊರಡಿಸಿದ್ದಾರೆ ಎಂದು ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಮಂಗಳವಾರ ತಿಳಿಸಿದ್ದಾರೆ.

ದೆಹಲಿ ಸಿಎಂ ಕೇಜ್ರಿವಾಲ್
'ನನ್ನನ್ನು ಜೈಲಿನಲ್ಲಿಡಲು ಸಾಧ್ಯವಿಲ್ಲ, ಶೀಘ್ರದಲ್ಲೇ ಹೊರಬರುತ್ತೇನೆ': ED ಕಸ್ಟಡಿಯಿಂದ ಕೇಜ್ರಿವಾಲ್ ಸಂದೇಶ

ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಲಭ್ಯವಿರುವ ಪ್ರಯೋಗಾಲಯ ಪರೀಕ್ಷೆಗಳಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು, ನಿರ್ದೇಶನ ನೀಡಿದ್ದಾರೆ. ಸಮಸ್ಯೆಗಳನ್ನು ಪರಿಹರಿಸಲು ಆರೋಗ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಲಿದೆ ಎಂದು ಭಾರದ್ವಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇಡಿ ಬಂಧನದಿಂದ ಕೇಜ್ರಿವಾಲ್ ಅವರ ನಿರ್ದೇಶನಗಳು ಬಂದರೂ ಅವರು, ಯಾವಾಗಲೂ ದೆಹಲಿಯ ಜನರ ಯೋಗಕ್ಷೇಮದ ಬಗ್ಗೆ ಯೋಚಿಸುತ್ತಾರೆ ಎಂದು ಅವರು ಹೇಳಿದರು.

ಕಳೆದ ವಾರ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 28 ರವರೆಗೆ ಇಡಿ ಕಸ್ಟಡಿಯಲ್ಲಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರು ನಗರದ ಕೆಲವು ಭಾಗಗಳಲ್ಲಿನ ನೀರು ಮತ್ತು ಒಳಚರಂಡಿ ಸಮಸ್ಯೆಗಳನ್ನು ಪರಿಹರಿಸಲು ಜಲ ಸಚಿವ ಅತಿಶಿಗೆ ಆದೇಶ ನೀಡಿದ್ದರು. ಕಸ್ಟಡಿಯಲ್ಲಿದ್ದಾಗ ಆದೇಶ ನೀಡುವ ವಿಷಯವು ಪಿಎಂಎಲ್‌ಎ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಇಡಿ ಪರಿಶೀಲಿಸುತ್ತದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com