ಲಡಾಖ್: ಶೈಕ್ಷಣಿಕ ಕ್ಷೇತ್ರದ ಸುಧಾರಕ ಸೋನಮ್ ವಾಂಗ್ ಚುಕ್ ಲಡಾಖ್ ವಿಷಯವಾಗಿ ಕೈಗೊಂಡಿದ್ದ ಉಪವಾಸ ಮುಷ್ಕರವನ್ನು ಹಿಂಪಡೆದಿದ್ದಾರೆ.
ಲೇಹ್, ಲಡಾಖ್ ನಲ್ಲಿ ವಾಂಗ್ ಚುಕ್ ಉಪವಾಸ ಕೈಗೊಂಡಿದ್ದರು. ಲಡಾಖ್ ಗೆ ರಾಜ್ಯದ ಸ್ಥಾನಮಾನ ಮತ್ತು ದುರ್ಬಲವಾದ ಹಿಮಾಲಯದ ಪರಿಸರದ ರಕ್ಷಣೆಗಾಗಿ ಆಗ್ರಹಿಸಿ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.
ಕೈಗಾರಿಕೀಕರಣದಿಂದಾಗಿ ಹಿಮಾಲಯ ಪ್ರದೇಶಕ್ಕೆ ಹಾನಿ ಕುರಿತು ಅರಿವು ಮೂಡಿಸಲು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜನಪ್ರಿಯ ಹವಾಮಾನ ಹೋರಾಟಗಾರ ಹಾಗೂ ಶಿಕ್ಷಣ ಸುಧಾರಣಾವಾದಿ ಸೋನಮ್ ವಾಂಗ್ಚುಕ್ ಅವರಿಗೆ ನಗರದಲ್ಲಿನ ನಿಸರ್ಗ ಪ್ರೇಮಿಗಳು ಬೆಂಬಲ ವ್ಯಕ್ತಪಡಿಸಿದ್ದರು.
Advertisement