ರಾಯ್ಪುರ: ರಾಯ್ಪುರದಿಂದ ಸುಮಾರು 350 ಕಿಮೀ ದೂರದಲ್ಲಿರುವ ಬಿಜಾಪುರದ ಹರಿತ ಜಿಲ್ಲೆಯ ಚಿಪುರ್ಭಟ್ಟಿ ಪ್ರದೇಶದಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಕಾನೂನುಬಾಹಿರ ಸಿಪಿಐ(ಮಾವೋವಾದಿ)ನ ಆರು ಬಂಡುಕೋರರನ್ನು ಭದ್ರತಾ ಪಡೆ ಹೊಡೆದುರುಳಿಸಿವೆ.
ಬಿಜಾಪುರ ಪೊಲೀಸರ ಪ್ರಕಾರ, ಮಾವೋವಾದಿಗಳು ಈ ಪ್ರದೇಶದಲ್ಲಿ ಮೂವರು ಗ್ರಾಮಸ್ಥರನ್ನು ಕೊಂದ ನಂತರ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್), ಎಲೈಟ್ ಕೋಬ್ರಾ ಘಟಕ ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ಗಳ (ಡಿಆರ್ಜಿ) ಜಂಟಿ ತಂಡ ಶೋಧ ಕಾರ್ಯಾಚರಣೆ ಪ್ರಾರಂಭಿಸಿತು.
"ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಸುಳಿವು ನೀಡಿದ ನಂತರ ಭದ್ರತಾ ಪಡೆಗಳು ಮಂಗಳವಾರ ತಡರಾತ್ರಿ ಕಾರ್ಯಾಚರಣೆಗೆ ತೆರಳಿದವು. ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಸಂಭವಿಸಿದೆ. ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿಯ(ಪಿಎಲ್ಜಿಎ) 10 ಮಾವೋವಾದಿಗಳು ತಲ್ಪೆರು ನದಿಯ ಸಮೀಪದಲ್ಲಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಟಿಎನ್ಐಇಗೆ ತಿಳಿಸಿದ್ದಾರೆ.
ಇದುವರೆಗೆ ಆರು ಮೃತದೇಹಗಳನ್ನು ಭದ್ರತಾ ಪಡೆಗಳು ಹೊರತೆಗೆದಿದ್ದು, ಇನ್ನೂ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಎನ್ಕೌಂಟರ್ನ ನಂತರ ಹಲವಾರು ಮಾವೋವಾದಿಗಳು ಗಾಯಗೊಂಡಿರುವ ಸಾಧ್ಯತೆಯಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ.
Advertisement