ಅರವಿಂದ್ ಕೇಜ್ರಿವಾಲ್ - ವಿ ಕೆ ಸಕ್ಸೆನಾ
ದೇಶ
ಜೈಲಿನಿಂದ ಸರ್ಕಾರ ನಡೆಸಲಾಗುವುದಿಲ್ಲ: ದೆಹಲಿ ಲೆಫ್ಟಿನೆಂಟ್ ಗವರ್ನರ್
ಸರ್ಕಾರವನ್ನು ಜೈಲಿನಿಂದ ನಡೆಸಲಾಗುವುದಿಲ್ಲ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಬುಧವಾರ ಹೇಳಿದ್ದಾರೆ.
ನವದೆಹಲಿ: ಸರ್ಕಾರವನ್ನು ಜೈಲಿನಿಂದ ನಡೆಸಲಾಗುವುದಿಲ್ಲ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಬುಧವಾರ ಹೇಳಿದ್ದಾರೆ.
ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು, ತಮ್ಮ ನಾಯಕ ಜೈಲಿನಿಂದಲೇ ಸರ್ಕಾರ ನಡೆಸುತ್ತಾರೆ ಎಂದು ಎಎಪಿ ನಾಯಕರ ಹೇಳಿಕೆಗಳ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಟೈಮ್ಸ್ ನೌ ಶೃಂಗಸಭೆಯಲ್ಲಿ ಮಾತನಾಡಿದ ಸಕ್ಸೆನಾ, “ಸರ್ಕಾರವನ್ನು ಜೈಲಿನಿಂದ ನಡೆಸಲಾವುದಿಲ್ಲ ಎಂದು ನಾನು ದೆಹಲಿಯ ಜನರಿಗೆ ಭರವಸೆ ನೀಡಬಲ್ಲೆಎಂದಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿದ್ದು, ನಂತರ ದೆಹಲಿ ನ್ಯಾಯಾಲಯ ಅವರನ್ನು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ