ಸಿಎಂ ಏಕನಾಥ್ ಶಿಂಧೆ ಸಮ್ಮುಖದಲ್ಲಿ ನಟ ಗೋವಿಂದ ಶಿವಸೇನೆ ಸೇರ್ಪಡೆ!

ಬಾಲಿವುಡ್ ಹಿರಿಯ ನಟ ಗೋವಿಂದ ಶಿವಸೇನೆ ಸೇರಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಗೋವಿಂದ, ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಸಿಎಂ ಏಕನಾಥ್ ಶಿಂಧೆ ಅವರೊಂದಿಗೆ ನಟ ಗೋವಿಂದ
ಸಿಎಂ ಏಕನಾಥ್ ಶಿಂಧೆ ಅವರೊಂದಿಗೆ ನಟ ಗೋವಿಂದ
Updated on

ಮುಂಬೈ: ಬಾಲಿವುಡ್ ಹಿರಿಯ ನಟ ಗೋವಿಂದ ಶಿವಸೇನೆ ಸೇರಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಗೋವಿಂದ, ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಈ ತಿಂಗಳ ಆರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಅವರೊಂದಿಗೆ ಗೋವಿಂದ ಸಭೆ ನಡೆಸಿದ್ದರು. ಕಳೆದ ವಾರ ನಡೆದ ಈ ಸಭೆಯ ಸಂದರ್ಭದಲ್ಲಿ ಅವರ ರಾಜಕೀಯಕ್ಕೆ ಮರಳುವ ವದಂತಿಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಗೋವಿಂದ ರಾಜಕೀಯ ಕ್ಷೇತ್ರಕ್ಕೆ ಹೊಸಬರಲ್ಲ. 2004 ರಲ್ಲಿ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರಕ್ಕೆ ಯಶಸ್ವಿಯಾಗಿ ಸ್ಪರ್ಧಿಸುವ ಮೂಲಕ ಹಿರಿಯ ಬಿಜೆಪಿ ನಾಯಕ ರಾಮ್ ನಾಯಕ್ ಅವರನ್ನು ಸೋಲಿಸಿದ್ದರು. ಆದರೆ, ಬಳಿಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com