ಬನಿಹಾಲ್/ಜಮ್ಮು: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಎಸ್ಯುವಿ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿರುವ ಘಟನೆ ರಾಂಬನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾಹನವು ಶ್ರೀನಗರದಿಂದ ಜಮ್ಮುವಿಗೆ ತೆರಳುತ್ತಿತ್ತು ಮತ್ತು ಅದು ಜಿಲ್ಲೆಯ ಬ್ಯಾಟರಿ ಚೆಶ್ಮಾ ಪ್ರದೇಶದಲ್ಲಿ 1.15 ರ ಸುಮಾರಿಗೆ 300 ಅಡಿ ಆಳದ ಕಮರಿಗೆ ಬಿದ್ದಿದೆ. ಘಟನೆಯಲ್ಲಿ ಹತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.
ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಸಿಬ್ಬಂದಿ ಸ್ಥಳದಲ್ಲಿದ್ದಾರೆ.
ಭಾರಿ ಮಳೆಯ ನಡುವೆಯೇ 10 ಪ್ರಯಾಣಿಕರ ಮೃತದೇಹಗಳನ್ನು ಕಮರಿಯಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರಿನ ಚಾಲಕ ಜಮ್ಮುವಿನ ಅಂಬ್ ಘೋಥಾದ ಬಲ್ವಾನ್ ಸಿಂಗ್ (47) ಮತ್ತು ಬಿಹಾರದ ಪಶ್ಚಿಮ ಚಂಪಾರಣ್ನ ವಿಪಿನ್ ಮುಖಿಯಾ ಭೈರಗಾಂಗ್ ಮೃತಪಟ್ಟವರಲ್ಲಿ ಸೇರಿದ್ದಾರೆ ಎಂದು ಅವರು ಹೇಳಿದರು.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement