Katchatheevu island: 'ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪ ಬಿಟ್ಟುಕೊಟ್ಟ ಕಾಂಗ್ರೆಸ್, ಅದನ್ನು ಎಂದಿಗೂ ನಂಬಲು ಸಾಧ್ಯವಿಲ್ಲ'- ಪ್ರಧಾನಿ ಮೋದಿ

1974ರಲ್ಲಿ ವಿವಾದಿತ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಟ್ಟ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್‌ ನ್ನು ಟೀಕಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ್ದಾರೆ. 1974ರಲ್ಲಿ ವಿವಾದಿತ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಟ್ಟ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್‌ ನ್ನು ಟೀಕಿಸಿದ್ದಾರೆ.

ಕಚ್ಚತೀವುವನ್ನು ಶ್ರೀಲಂಕಾಗೆ ಅಂದಿನ ಇಂದಿರಾ ಗಾಂಧಿ ಸರ್ಕಾರ ಹಸ್ತಾಂತರಿಸಿತ್ತು ಎಂದು ಇತ್ತೀಚೆಗೆ ಆರ್ ಟಿಐ ಮೂಲಕ ಬಹಿರಂಗವಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದಾರೆ.

ಕಾಂಗ್ರೆಸ್ ಮೇಲೆ ನಂಬಿಕೆ ಕೊರತೆ: ಶ್ರೀಲಂಕಾ ದ್ವೀಪ ಬಿಟ್ಟುಕೊಟ್ಟ ಇಂದಿರಾ ಗಾಂಧಿ ಸರ್ಕಾರದ ನಿರ್ಧಾರದ ಬಗ್ಗೆ ವಿವರವಾದ ವಿವರಣೆಯನ್ನು ನೀಡಿದ್ದ ಖಾಸಗಿ ಸುದ್ದಿ ಪತ್ರಿಕೆಯ ಲೇಖನವನ್ನು ಹಂಚಿಕೊಂಡ ಪ್ರಧಾನಿ ಮೋದಿ, “Eye-opening and startling, “ಕಣ್ಣು ತೆರೆಸುವ ಮತ್ತು ಅಚ್ಚರಿಯ ವಿಷಯ” ಎಂದು ಬರೆದು ಕಾಂಗ್ರೆಸ್ ಪಕ್ಷವನ್ನು ನಂಬಲು ಸಾಧ್ಯವಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ದ್ವೀಪವನ್ನು ಹಸ್ತಾಂತರ ಮಾಡಿದ್ದು “ಕೆಟ್ಟ” ನಿರ್ಧಾರ. 1974 ರಲ್ಲಿ ಕಾಂಗ್ರೆಸ್ ಸರ್ಕಾರವು ಕಚ್ಚತೀವು ಹಸ್ತಾಂತರಿಸಿದ್ದು ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ನಾವು ಕಾಂಗ್ರೆಸ್ ನ್ನು ಎಂದಿಗೂ ನಂಬಲು ಸಾಧ್ಯವಿಲ್ಲ. ಭಾರತದ ಏಕತೆ, ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸುವುದು ಕಾಂಗ್ರೆಸ್‌ 75 ವರ್ಷಗಳಿಂದ ಮಾಡಿಕೊಂಡು ಬಂದಿರುವ ಕೆಲಸ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ
ಕಚ್ಚತೀವು ದ್ವೀಪವನ್ನು ಇಂದಿರಾ ಗಾಂಧಿ ಸರ್ಕಾರ ಶ್ರೀಲಂಕಾಕ್ಕೆ ನೀಡಿತು: ಪ್ರಧಾನಿ ಮೋದಿ ಲೋಕಸಭೆಯಲ್ಲಿ ಆರೋಪ

ಐತಿಹಾಸಿಕ ಹಿನ್ನೆಲೆ: ದಿವಂಗತ ಪ್ರಧಾನಿ ಜವಾಹರಲಾಲ್ ನೆಹರು ಅವರು ಕಚ್ಚತೀವು ದ್ವೀಪದ ಸಾರ್ವಭೌಮತ್ವದ ಬಗ್ಗೆ ಕಳವಳವನ್ನು ಅಸಮಂಜಸ ಎಂದು ತಳ್ಳಿಹಾಕಿದ್ದರು. ಪ್ರತಿಪಕ್ಷಗಳ ತೀವ್ರ ವಿರೋಧದ ಹೊರತಾಗಿಯೂ, ಅಂತಿಮವಾಗಿ ನಿರ್ಧಾರವನ್ನು ಒಪ್ಪಿಕೊಳ್ಳಲಾಗಿತ್ತು ಎಂದು ಲೇಖನ ಹೇಳುತ್ತದೆ.

ಮರುಕಳಿಸಿದ ಹಿಂದಿನ ಹೇಳಿಕೆಗಳು: ಪ್ರಧಾನಿ ಮೋದಿಯವರ ಖಂಡನೆಯು ಸಂಸತ್ತಿನಲ್ಲಿ ಮಾಡಿದ ಹಿಂದಿನ ಹೇಳಿಕೆಗಳನ್ನು ಪ್ರತಿಧ್ವನಿಸಿತು, ಅಲ್ಲಿ ಅವರು ಇಂದಿರಾ ಗಾಂಧಿ ನೇತೃತ್ವದ ಸರ್ಕಾರವು 1974 ರಲ್ಲಿ ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪವನ್ನು ಬಿಟ್ಟುಕೊಟ್ಟಿದೆ ಎಂದು ಆರೋಪಿಸಿದ್ದರು. ರಾಜಕೀಯ ತಂತ್ರಗಳಿಂದ ಉಂಟಾದ ಐತಿಹಾಸಿಕ ವಿಭಜನೆಯ ಎಂದು ವಿಷಾದಿಸಿದ್ದರು. ಹಿಂದಿನ ಅನ್ಯಾಯಗಳನ್ನು ಒಪ್ಪಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು.

ತಮಿಳುನಾಡು ಮುಖ್ಯಮಂತ್ರಿ ಟೀಕೆ: ಪ್ರಧಾನಿ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಕನ್ಯಾಕುಮಾರಿಯಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ ಅವರು ಸಾರ್ವಜನಿಕರನ್ನು ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿ ಪ್ರಧಾನಿಯವರ ಆರೋಪಕ್ಕೆ ಸವಾಲು ಹಾಕಿದ್ದರು.

ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವಾಗ ದ್ರಾವಿಡ ಪ್ರಾಂತ್ಯದಲ್ಲಿ ರಾಜಕೀಯ ಹಿಡಿತ ಸಾಧಿಸುವ ತನ್ನ ಪ್ರಯತ್ನಗಳಿಗೆ ಈ ವಿಷಯವನ್ನು ಸದ್ಭಳಕೆ ಮಾಡಿಕೊಳ್ಳಲು ಬಿಜೆಪಿ ಬಯಸುತ್ತಿದೆ.

1974 ರಲ್ಲಿ ಅಂದಿನ ಇಂದಿರಾ ಗಾಂಧಿ ಸರ್ಕಾರವು ಪಾಕ್ ಸ್ಟ್ರೈಟ್‌ನಲ್ಲಿರುವ ಪ್ರದೇಶವನ್ನು ನೆರೆಯ ದೇಶಕ್ಕೆ ಹಸ್ತಾಂತರಿಸುವ ನಿರ್ಧಾರದ ಬಗ್ಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಆರ್‌ಟಿಐ ಉತ್ತರವನ್ನು ಆಧರಿಸಿ ವರದಿಯನ್ನು ಆಧರಿಸಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ವಿವಾದದ ಮೂಲವಾದ ಈ ವಿಷಯದ ಬಗ್ಗೆ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೇಳಿಕೆಗಳನ್ನು ವರದಿಯು ಉಲ್ಲೇಖಿಸುತ್ತದೆ, ಅವರು ದ್ವೀಪದ ಮೇಲಿನ ಹಕ್ಕುಗಳನ್ನು ಬಿಟ್ಟುಕೊಡಲು ಯಾವುದೇ ಹಿಂಜರಿಕೆಯಿಲ್ಲ ಎಂದು ಹೇಳಿದ್ದರು ಎಂದು ವರದಿ ಉಲ್ಲೇಖಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com