ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ, ಇತರ ನಾಯಕರು ಬಿಜೆಪಿ ಸೇರ್ಪಡೆ

ದೆಹಲಿ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಹಾಗೂ ಮಾಜಿ ನಗರಾಡಳಿತ ಸಚಿವ ರಾಜ್ ಕುಮಾರ್ ಚೌಹಾಣ್ ಸೇರಿದಂತೆ ಹಲವು ನಾಯಕರೊಂದಿಗೆ ಶನಿವಾರ ಬಿಜೆಪಿ ಸೇರ್ಪಡೆಯಾದರು.
ಬಿಜೆಪಿ ಸೇರಿದ ಅರವಿಂದರ್ ಸಿಂಗ್ ಲವ್ಲಿ
ಬಿಜೆಪಿ ಸೇರಿದ ಅರವಿಂದರ್ ಸಿಂಗ್ ಲವ್ಲಿ
Updated on

ನವದೆಹಲಿ: ದೆಹಲಿ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ, ಮಾಜಿ ನಗರಾಡಳಿತ ಸಚಿವ ರಾಜ್ ಕುಮಾರ್ ಚೌಹಾಣ್ ಮತ್ತು ಮಾಜಿ ಶಾಸಕರಾದ ನೀರಜ್ ಬಸೋಯಾ ಹಾಗೂ ನಸೀಬ್ ಸಿಂಗ್ ಸೇರಿದಂತೆ ಹಲವು ನಾಯಕರೊಂದಿಗೆ ಶನಿವಾರ ಬಿಜೆಪಿ ಸೇರ್ಪಡೆಯಾದರು.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ ಎಲ್ಲಾ ಮಾಜಿ ಕಾಂಗ್ರೆಸ್ ನಾಯಕರು, ಲೋಕಸಭೆ ಚುನಾವಣೆಯಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಜೊತೆಗಿನ ಮೈತ್ರಿಯನ್ನು ಟೀಕಿಸಿದರು.

ತಮಗೆ ಬಿಜೆಪಿ ಸೇರಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರನ್ನು ಶ್ಲಾಘಿಸಿದ ಲವ್ಲಿ, ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಮೋದಿ ಹೆಚ್ಚಿನ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಹೇಳಿದರು.

ಬಿಜೆಪಿ ಸೇರಿದ ಅರವಿಂದರ್ ಸಿಂಗ್ ಲವ್ಲಿ
ಲೋಕಸಭೆ ಚುನಾವಣೆ: ಮೊದಲ ಬಾರಿ ಭರ್ಜರಿ ರೋಡ್ ಶೋ ನಡೆಸಿದ ದೆಹಲಿ ಸಿಎಂ ಪತ್ನಿ ಸುನೀತಾ

ಲವ್ಲಿ ಇತ್ತೀಚೆಗೆ ಎಎಪಿ ಜೊತೆಗಿನ ಮೈತ್ರಿಯನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಲೋಕಸಭೆ ಚುನಾವಣೆಗೆ ರಾಷ್ಟ್ರ ರಾಜಧಾನಿಯಲ್ಲಿ ಕನ್ಹಯ್ಯಾ ಕುಮಾರ್ ಮತ್ತು ಉದಿತ್ ರಾಜ್ ಸೇರಿದಂತೆ ಇತರ ಕೆಲ ಅಭ್ಯರ್ಥಿಗಳ ಆಯ್ಕೆಯಿಂದ ಲವ್ವಿ ಮತ್ತು ಇತರ ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ನಂಬಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com