ಮಧ್ಯಪ್ರದೇಶ: ಮರಳು ಮಾಫಿಯಾ, ಟ್ರ್ಯಾಕ್ಟರ್‌ ಹರಿಸಿ ಎಎಸ್‌ಐ ಹತ್ಯೆ!

ಮರಳು ಮಾಫಿಯಾ ದಂಧೆಯಲ್ಲಿ ತೊಡಗಿರುವವರು ಟ್ರಾಕ್ಟರ್ ಹರಿಸಿ ಎಎಸ್ ಐ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್‌ ಬಳಿ ಶನಿವಾರ ರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಧ್ಯಪ್ರದೇಶ: ಮರಳು ಮಾಫಿಯಾ ದಂಧೆಯಲ್ಲಿ ತೊಡಗಿರುವವರು ಟ್ರಾಕ್ಟರ್ ಹರಿಸಿ ಎಎಸ್ ಐ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್‌ ಬಳಿ ಶನಿವಾರ ರಾತ್ರಿ ನಡೆದಿದೆ.

ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಪೊಲೀಸ್ ತಂಡ ಗ್ರಾಮಕ್ಕೆ ಆಗಮಿಸಿದ ನಂತರ ಟ್ರಾಕ್ಟರ್ ಹರಿಸಿ ಎಎಸ್‌ಐ ಹತ್ಯೆ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ
ಪಾಟ್ನಾದಲ್ಲಿ ಮರಳು ಗಣಿಗಾರಿಕೆ ವಿಚಾರವಾಗಿ ಎರಡು ಗುಂಪುಗಳ ಘರ್ಷಣೆ: ನಾಲ್ವರ ಸಾವು

ಶಹದೋಲ್‌ನ ನೌಧಿಯಾದಲ್ಲಿ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್‌ಐ ಮಹೇಂದ್ರ ಬಗ್ರಿ ಮತ್ತು ಅವರ ತಂಡವು ವಾರಂಟ್‌ನೊಂದಿಗೆ ಆರೋಪಿಯನ್ನು ಬಂಧಿಸಲು ಹೋಗಿದ್ದಾಗ ಎಎಸ್ ಐ ಹತ್ಯೆ ಮಾಡಲಾಗಿದೆ. ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಾಗರ್ ತಿಳಿಸಿದ್ದಾರೆ.

ವಿಚಾರಣೆ ವೇಳೆ ಟ್ರ್ಯಾಕ್ಟರ್ ಮಾಲೀಕನ ಮಗನೂ ಇದರಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ..ಐಪಿಸಿ ಸೆಕ್ಷನ್ 302/34, 414, 379 ಹಾಗೂ ಗಣಿಗಾರಿಕೆಗೆ ಸಂಬಂಧಿಸಿದ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com