ಹೇಮಂತ್‌ ಕರ್ಕರೆ ಸತ್ತಿದ್ದು ಕಸಬ್‌ನ ಬಂದೂಕಿನಿಂದಲ್ಲ, RSS ಲಿಂಕ್ ಇರೋ ಪೊಲೀಸ್ ನಿಂದ: ಕಾಂಗ್ರೆಸ್ ನಾಯಕ

ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಕಾಂಗ್ರೆಸ್‌ನ ವಿಜಯ್ ವಾಡೆತ್ತಿವಾರ್ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟಾಗಿದೆ.
ಕಸಬ್-ಕರ್ಕರೆ
ಕಸಬ್-ಕರ್ಕರೆ
Updated on

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಕಾಂಗ್ರೆಸ್‌ನ ವಿಜಯ್ ವಾಡೆತ್ತಿವಾರ್ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟಾಗಿದೆ. 2008ರ ಮುಂಬೈ ದಾಳಿಯ ಸಂದರ್ಭದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮಾಜಿ ಮುಖ್ಯಸ್ಥ ಐಪಿಎಸ್ ಹೇಮಂತ್ ಕರ್ಕರೆ ಅವರನ್ನು ಪಾಕಿಸ್ತಾನಿ ಭಯೋತ್ಪಾದಕ ಕಸಬ್ ಕೊಂದಿಲ್ಲ ಎಂದು ವಿಜಯ್ ವಾಡೆಟ್ಟಿವಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆ ಅವರನ್ನು ಕೊಂದ ಬುಲೆಟ್ ಕಸಬ್ ಅಥವಾ ಭಯೋತ್ಪಾದಕರಿಂದ ಹಾರಿಸಲಾಗಿಲ್ಲ, ಆದರೆ ಆರ್‌ಎಸ್‌ಎಸ್‌ ಜೊತೆ ಲಿಂಕ್ ಇರುವ ಪೊಲೀಸ್ ಅಧಿಕಾರಿ ಬಂದೂಕಿನಿಂದ ಹಾರಿದ ಗುಂಡಿಗೆ ಬಲಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಎಟಿಎಸ್ ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಉಲ್ಲೇಖಿಸಿ ವಿಜಯ್ ವಾಡೆಟ್ಟಿವಾರ್ ಮುಂಬೈನ ಬಿಜೆಪಿ ಅಭ್ಯರ್ಥಿ ಉಜ್ವಲ್ ನಿಕಮ್ ವಿರುದ್ಧ ವಾಗ್ದಾಳಿ ನಡೆಸಿದರು. 'ಬಿರಿಯಾನಿ ವಿಷಯ ಪ್ರಸ್ತಾಪಿಸಿ ನಿಕಂ ಕಾಂಗ್ರೆಸ್‌ಗೆ ಮಾನಹಾನಿ ಮಾಡಿದ್ದಾರೆ. ಕಸಬ್ ಗೆ ಯಾರಾದರೂ ಬಿರಿಯಾನಿ ಕೊಡುತ್ತಾರಾ? ನಂತರ ಉಜ್ವಲ್ ನಿಕಮ್ ಅವರು ಎಂತಹ ವಕೀಲರು, ಅವರು ನ್ಯಾಯಾಲಯದಲ್ಲಿ ಸಾಕ್ಷಿ ಹೇಳಲು ಸಹ ಬಾರದ ದೇಶದ್ರೋಹಿ, ಮುಂಬೈ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆಯನ್ನು ಕೊಂದ ಬುಲೆಟ್ ಕಸಬ್‌ನ ಬಂದೂಕಿನದ್ದಲ್ಲ, ಆ ಸಮಯದಲ್ಲಿ ಆರ್‌ಎಸ್‌ಎಸ್‌ಗೆ ನಿಷ್ಠರಾಗಿದ್ದ ಪೊಲೀಸ್ ಅಧಿಕಾರಿ. ಈ ಸತ್ಯವನ್ನು ನ್ಯಾಯಾಲಯಕ್ಕೆ ಮರೆಮಾಚಿದ ದೇಶದ್ರೋಹಿಗಳಿಗೆ ಬಿಜೆಪಿ ಟಿಕೆಟ್ ನೀಡುತ್ತಿದ್ದರೆ, ಬಿಜೆಪಿ ಈ ದೇಶದ್ರೋಹಿಗಳಿಗೆ ಏಕೆ ಬೆಂಬಲ ನೀಡುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಕಸಬ್-ಕರ್ಕರೆ
ರಾಯಚೂರು: ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟಿನಿಂದ ಒದೆಯಬೇಕು; ಕಾಂಗ್ರೆಸ್ ಮುಖಂಡ ಬಷರುದ್ದಿನ್

ಹೇಳಿಕೆ ವೈರಲ್ ಆಗುತ್ತಿದ್ದಂತೆ ವಡೆತ್ತಿವಾರ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದು, 'ಅದು ನನ್ನ ಮಾತುಗಳಲ್ಲ, ಎಸ್.ಎಂ.ಮುಶ್ರೀಫ್ ಅವರ ಪುಸ್ತಕದಲ್ಲಿ ಬರೆದಿದ್ದನ್ನೇ ಹೇಳಿದ್ದೇನೆ. ಪುಸ್ತಕದಲ್ಲಿ ಸಂಪೂರ್ಣ ಮಾಹಿತಿ ಇತ್ತು. ಹೇಮಂತ್ ಕರ್ಕರೆ ಹೊಡೆದ ಗುಂಡು ಭಯೋತ್ಪಾದಕ ಸಿಡಿಸಿದ ಬುಲೆಟ್ ಅಲ್ಲ...'

ವಿಜಯ್ ವಡೆತ್ತಿವಾರ್ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮಾತನಾಡಿ, 'ಕಾಂಗ್ರೆಸ್ ತನ್ನ ವಿಶೇಷ ಮತಬ್ಯಾಂಕ್ ಅನ್ನು ಮೆಚ್ಚಿಸಲು ಮತ್ತು ಮತ ಪಡೆಯಲು ಯಾವುದೇ ಮಟ್ಟಕ್ಕೂ ಇಳಿಯಬಹುದು. 26/11 ಭಯೋತ್ಪಾದಕರಿಗೆ ಕ್ಲೀನ್ ಚಿಟ್ ನೀಡುವ ಮೂಲಕ ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಪಿ ವಿಜಯ್ ವಾಡೆಟ್ಟಿವಾರ್ ಇದನ್ನು ಸಾಬೀತುಪಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com