ನಾಳೆ ಕೇದಾರನಾಥ, ಗಂಗೋತ್ರಿ, ಯಮುನೋತ್ರಿ ದೇವಾಲಯಗಳು ಓಪನ್

ಉತ್ತರಾಖಂಡದ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳು ಶುಕ್ರವಾರ(ಮೇ 10) ಭಕ್ತರಿಗಾಗಿ ತೆರೆಯಲಿವೆ.
ಕೇದಾರನಾಥ
ಕೇದಾರನಾಥ
Updated on

ಡೆಹಗಾಡೂನ್: ಉತ್ತರಾಖಂಡದ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳು ಶುಕ್ರವಾರ(ಮೇ 10) ಭಕ್ತರಿಗಾಗಿ ತೆರೆಯಲಿವೆ.

ಹಿಮಾಲಯದಲ್ಲಿ ನೆಲೆಗೊಂಡಿರುವ ಈ ಪ್ರಸಿದ್ಧ ದೇವಾಲಯಗಳು ಪ್ರತಿ ವರ್ಷ ಚಳಿಗಾಲದ ಪ್ರಾರಂಭವಾಗುತ್ತಿದ್ದಂತೆ ಮುಚ್ಚಲ್ಪಡುತ್ತವೆ. ಏಕೆಂದರೆ ಹಿಮಪಾತದಿಂದಾಗಿ ಈ ಅವಧಿಯಲ್ಲಿ ದೇವಾಲಗಳನ್ನು ಬಂದ್ ಮಾಡಲಾಗುತ್ತದೆ ಮತ್ತು ಬೇಸಿಗೆ ಆರಂಭದೊಂದಿಗೆ ಪುನಃ ತೆರೆಯಲ್ಪಡುತ್ತವೆ.

ಕೇದಾರನಾಥ ಮತ್ತು ಯಮುನೋತ್ರಿ ದೇವಸ್ಥಾನಗಳನ್ನು ನಾಳೆ ಬೆಳಗ್ಗೆ 7 ಗಂಟೆಗೆ ತೆರೆಯಲಾಗುವುದು ಮತ್ತು ಗಂಗೋತ್ರಿ ದೇವಸ್ಥಾನವನ್ನು ಮಧ್ಯಾಹ್ನ 12.20 ಕ್ಕೆ ತೆರೆಯಲಾಗುವುದು ಎಂದು ದೇವಾಲಯ ಸಮಿತಿ ಅಧಿಕಾರಿಗಳು ತಿಳಿಸಿದ್ದಾರೆ.

ಕೇದಾರನಾಥ
ಕೇದಾರನಾಥ ದೇವಾಲಯ ಮೇ 10ರಿಂದ ಭಕ್ತರ ದರ್ಶನಕ್ಕೆ ಮುಕ್ತ

ಮೇ 12 ರಂದು ಬೆಳಗ್ಗೆ 6 ಗಂಟೆಗೆ ಉತ್ತರಾಖಂಡದ 'ಚಾರ್ಧಾಮ್ ಯಾತ್ರೆ'ಯ ಭಾಗವಾಗಿರುವ ಬದರಿನಾಥ್ ದೇವಸ್ಥಾನ ತೆರೆಯಲಾಗುತ್ತದೆ.

ಕೇದಾರನಾಥವನ್ನು 20 ಕ್ವಿಂಟಾಲ್ ಹೂವಿನಿಂದ ಅಲಂಕರಿಸಲಾಗುತ್ತಿದೆ ಎಂದು ಬದರಿನಾಥ-ಕೇದಾರನಾಥ ದೇವಸ್ಥಾನ ಸಮಿತಿಯ ಮಾಧ್ಯಮ ಪ್ರಭಾರಿ ಹರೀಶ್ ಗೌರ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com