ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಎರಡು ವಾಹನಗಳ ನಡುವೆ ಡಿಕ್ಕಿ, 6 ಮಂದಿ ದುರ್ಮರಣ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಮಗಳವಾರ ನಡೆದಿದೆ.
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು.
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು.
Updated on

ಲಖನೌ: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಮಗಳವಾರ ನಡೆದಿದೆ.

ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಹಾಪುರದಿಂದ ಮೊರಾದಾಬಾದ್ ಕಡೆಗೆ ಕಾರು ವೇಗವಾಗಿ ಹೋಗುತ್ತಿತ್ತು. ಕೊತ್ವಾಲಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-9 ರಲ್ಲಿರುವ ಅಲ್ಲಾಬಕ್ಷ್‌ಪುರ ಗ್ರಾಮವನ್ನು ತಲುಪಿದಾಗ, ಚಾಲಕನ ನಿಯಂತ್ರಣ ತಪ್ಪಿ ಕಾರು ಹೆದ್ದಾರಿಯಲ್ಲಿನ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇನ್ನೊಂದು ಕಡೆಯಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾ ಕಾರು ಪಲ್ಟಿ ಹೊಡೆದಿದೆ.

ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು.
Accident: ಕಲಬುರಗಿಯಲ್ಲಿ ಭೀಕರ ಅಪಘಾತ: ಲಾರಿ- ಬೈಕ್‌ ಢಿಕ್ಕಿ; ಪತ್ನಿ ಎದುರೇ ಪ್ರಾಣಬಿಟ್ಟ ಪತಿ

ಅಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ವಾಹನಗಳು ಡಿಕ್ಕಿ ಹೊಡೆದ ಸದ್ದು ಕೇಳಿದ ಗ್ರಾಮಸ್ಥರು ಎಚ್ಚೆತ್ತುಕೊಂಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಗ್ರಾಮಸ್ಥರು ಕಾರಿನಲ್ಲಿ ಸಿಲುಕಿದ್ದವರನ್ನು ಹೊರ ತೆಗೆಯಲು ಯತ್ನಿಸಿದರಾದರೂ ಕಾರಿನಲ್ಲಿ ಸಿಲುಕಿದ್ದವರು ಬಹಳ ಹೊತ್ತಾದರೂ ಹೊರತೆಗೆಯಲು ಸಾಧ್ಯವಾಗಲಿಲ್ಲ.

ನಂತರ ಗ್ರಾಮಸ್ಥರ ನೆರವಿನಿಂದ ಪೊಲೀಸರು ಕಾರನ್ನು ಕಟ್ ಮಾಡಿ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ತಕ್ಷಣ ಆಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟೊತ್ತಿಗಾಗಲ ಆರು ಮಂದಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com