ಕಿರ್ಗಿಸ್ತಾನ್‌: ಬಿಷ್ಕೆಕ್‌ನಲ್ಲಿ ಹಿಂಸಾಚಾರ, ಮನೆಯೊಳಗೆ ಇರುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

ಕಿರ್ಗಿಜ್ ರಾಜಧಾನಿ ಬಿಷ್ಕೆಕ್‌ನಲ್ಲಿ ಕೆಲವು ಸ್ಥಳೀಯರು ಮತ್ತು ವಿದೇಶಿಯರ ನಡುವೆ ಹೊಡೆದಾಟದ ವರದಿ ನಂತರ ತನ್ನ ದೇಶದ ವಿದ್ಯಾರ್ಥಿಗಳು ಮನೆಯೊಳಗೆ ಇರುವಂತೆ ಭಾರತ ಸೂಚಿಸಿದೆ.
ಜೈಶಂಕರ್
ಜೈಶಂಕರ್
Updated on

ಬಿಷ್ಕೆಕ್‌ : ಕಿರ್ಗಿಜ್ ರಾಜಧಾನಿ ಬಿಷ್ಕೆಕ್‌ನಲ್ಲಿ ಕೆಲವು ಸ್ಥಳೀಯರು ಮತ್ತು ವಿದೇಶಿಯರ ನಡುವೆ ಹೊಡೆದಾಟದ ವರದಿ ನಂತರ ತನ್ನ ದೇಶದ ವಿದ್ಯಾರ್ಥಿಗಳು ಮನೆಯೊಳಗೆ ಇರುವಂತೆ ಭಾರತ ಸೂಚಿಸಿದೆ. ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದು, ಈಗ ಪರಿಸ್ಥಿತಿ 'ಶಾಂತ'ವಾಗಿದೆ ಎಂದು ಮಧ್ಯ ಏಷ್ಯಾ ದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಭಾರತೀಯ ರಾಯಭಾರಿ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ಭಾರತೀಯ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.

'ಬಿಷ್ಕೆಕ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ವರದಿಯಾಗಿದೆ. ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ವಿದ್ಯಾರ್ಥಿಗಳಿಗೆ ಬಲವಾಗಿ ಸಲಹೆ ನೀಡಲಾಗಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ ಆದರೆ ವಿದ್ಯಾರ್ಥಿಗಳು ಸದ್ಯಕ್ಕೆ ಮನೆಯೊಳಗೆ ಇರಲು ಮತ್ತು ಯಾವುದೇ ಸಮಸ್ಯೆಯ ಸಂದರ್ಭದಲ್ಲಿ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ಸ್ಥಳೀಯ ಮತ್ತು ವಿದೇಶಿ ಜನರ ನಡುವಿನ ಜಗಳದಿಂದ ಭಾಗದಲ್ಲಿ ಬಿಷ್ಕೆಕ್‌ನಲ್ಲಿ ಹಿಂಸಾಚಾರ ನಡೆದಿದ್ದು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ದಿ ಟೈಮ್ಸ್ ಆಫ್ ಸೆಂಟ್ರಲ್ ಏಷ್ಯಾ ವರದಿ ಮಾಡಿದೆ.

ಈ ಘಟನೆಯು ಕಿರ್ಗಿಸ್ತಾನ್‌ನಲ್ಲಿ ದಕ್ಷಿಣ ಏಷ್ಯಾದ ಅನೇಕ ವಲಸಿಗರ ಮೇಲಿನ ಉದ್ವಿಗ್ನತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅದು ಹೇಳಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಸುಮಾರು 15,000 ಎಂದು ಅಂದಾಜಿಸಲಾಗಿದೆ. ಅವರಲ್ಲಿ ಎಷ್ಟು ಮಂದಿ ಬಿಷ್ಕೆಕ್‌ನಲ್ಲಿದ್ದಾರೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com