ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಫೋನ್ ಡೇಟಾ ಹಿಂಪಡೆಯಲು ಬಿಭವ್ ನನ್ನು ಮುಂಬೈಗೆ ಕರೆದೊಯ್ದ ಪೊಲೀಸರು

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಅವರನ್ನು ಅವರ ಫಾರ್ಮಾಟ್‌ ಮಾಡಲಾದ ಐಫೋನ್‌ನಿಂದ ಡೇಟಾ ಹಿಂಪಡೆಯಲು ಮುಂಬೈಗೆ ಕರೆದೊಯ್ಯಲಾಗುತ್ತಿದೆ.
ಬಿಭವ್‌ ಕುಮಾರ್‌
ಬಿಭವ್‌ ಕುಮಾರ್‌
Updated on

ನವದೆಹಲಿ: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಅವರನ್ನು ಅವರ ಫಾರ್ಮಾಟ್‌ ಮಾಡಲಾದ ಐಫೋನ್‌ನಿಂದ ಡೇಟಾ ಹಿಂಪಡೆಯಲು ಮುಂಬೈಗೆ ಕರೆದೊಯ್ಯಲಾಗುತ್ತಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ದೆಹಲಿ ಸಿಎಂ ನಿವಾಸದಲ್ಲಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಭವ್ ಕುಮಾರ್ ಅವರನ್ನು ಬಂಧಿಸಲಾಗಿದ್ದು, ಐದು ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮುಂಬೈನಲ್ಲಿರುವ ಕೆಲವು ವ್ಯಕ್ತಿ ಅಥವಾ ಸಾಧನಕ್ಕೆ ಡೇಟಾವನ್ನು ವರ್ಗಾಯಿಸುವ ಮೊದಲು ಕುಮಾರ್ ತನ್ನ ಫೋನ್ ಅನ್ನು ಫಾರ್ಮ್ಯಾಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಭವ್‌ ಕುಮಾರ್‌
ಸ್ವಾತಿ ಮಾಲಿವಾಲ್ ಪ್ರಕರಣ: ಬಿಭವ್ ಕುಮಾರ್ ಗೆ 5 ದಿನಗಳ ಪೊಲೀಸ್ ಕಸ್ಟಡಿ

ಬಿಭವ್‌ ಕುಮಾರ್‌ ಬಂಧನದ ನಂತರ ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಯಿತು. ಆದರೆ ಅದನ್ನು ಫಾರ್ಮ್ಯಾಟ್ ಮಾಡಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com