ಲೋಕಸಭೆ ಚುನಾವಣೆ: 6ನೇ ಹಂತ ಮುಕ್ತಾಯ; ಶೇ.58. 82 ರಷ್ಟು ಮತದಾನ; ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ವೋಟಿಂಗ್

ಲೋಕಸಭೆ ಚುನಾವಣೆ ಕ್ಲೈಮ್ಯಾಕ್ಸ್‌ನತ್ತ ಸಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ಎಲ್ಲಾ 7 ಕ್ಷೇತ್ರಗಳು ಸೇರಿದಂತೆ 58 ಕ್ಷೇತ್ರಗಳಲ್ಲಿ ಶನಿವಾರ 6ನೇ ಹಂತದ ಮತದಾನ ನಡೆದಿದೆ.
ಮತ ಚಲಾಯಿಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ
ಮತ ಚಲಾಯಿಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ
Updated on

ನವದೆಹಲಿ: ಲೋಕಸಭೆ ಚುನಾವಣೆ ಕ್ಲೈಮ್ಯಾಕ್ಸ್‌ನತ್ತ ಸಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ಎಲ್ಲಾ 7 ಕ್ಷೇತ್ರಗಳು ಸೇರಿದಂತೆ 58 ಕ್ಷೇತ್ರಗಳಲ್ಲಿ ಶನಿವಾರ 6ನೇ ಹಂತದ ಮತದಾನ ನಡೆದಿದೆ.

ಇಂದು ಸಂಜೆ 5.30 ವರೆಗೆ ಶೇ. 58.82 ರಷ್ಟು ಮತದಾನವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ರಾಜ್ಯವಾರು ಮತದಾನದಲ್ಲಿ ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಅಂದರೆ ಶೇ. 78 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮತ ಚಲಾಯಿಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ
ಲೋಕಸಭೆ ಚುನಾವಣೆ: ನವದೆಹಲಿ ಕ್ಷೇತ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಸೋನಿಯಾ, ರಾಹುಲ್ ಮತದಾನ

ಉತ್ತರ ಪ್ರದೇಶದ 14 ಸ್ಥಾನಗಳು, ಹರ್ಯಾಣದ ಎಲ್ಲಾ 10 ಸ್ಥಾನಗಳು, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಎಂಟು ಸ್ಥಾನಗಳು, ದೆಹಲಿಯ ಎಲ್ಲಾ ಏಳು ಸ್ಥಾನಗಳು, ಒಡಿಶಾದ 6 ಸ್ಥಾನಗಳು, ಜಾರ್ಖಂಡ್‌ನ 4 ಸ್ಥಾನಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಒಂದು ಸ್ಥಾನಕ್ಕೆ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಸಂಜೆ 6.30ರ ವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿತ್ತು.

ಪಶ್ಚಿಮ ಬಂಗಾಳದ ಕೆಲವೆಡೆ ಹಿಂಸಾಚಾರ: ಪಶ್ಚಿಮ ಬಂಗಾಳದ ಎಂಟು ಲೋಕಸಭಾ ಕ್ಷೇತ್ರಗಳ ಕೆಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ. ಚುನಾವಣಾ ಆಯೋಗಕ್ಕೆ ವಿವಿಧ ರಾಜಕೀಯ ಪಕ್ಷಗಳಿಂದ ಬೆಳಗ್ಗೆ 11 ಗಂಟೆಯವರೆಗೆ 954 ದೂರುಗಳು ಬಂದಿದ್ದು, ಇವಿಎಂ ಅಸಮರ್ಪಕ ಕಾರ್ಯಗಳು ಮತ್ತು ಏಜೆಂಟರನ್ನು ಬೂತ್‌ಗಳಿಗೆ ಪ್ರವೇಶಿಸದಂತೆ ತಡೆಯಲಾಗಿದೆ.

ಘಟಾಲ್ ಕ್ಷೇತ್ರದಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಮತಗಟ್ಟೆ ಏಜೆಂಟರನ್ನು ಬೂತ್‌ಗಳಿಗೆ ಪ್ರವೇಶಿಸುವುದನ್ನು ತಡೆಯುವ ಬಗ್ಗೆ ಘರ್ಷಣೆ ನಡೆದಿದೆ. ಟಿಎಂಸಿ ಗೂಂಡಾಗಳು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಹಿರಣ್ ಚಟರ್ಜಿ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಮತದಾನ ಆರಂಭಕ್ಕೂ ಮುನ್ನ ಇಂದು ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ವಿವಿಧ ರಾಜ್ಯಗಳಲ್ಲಿ ಅಣಕು ಮತದಾನ ನಡೆಸಲಾಯಿತು.

ಒಡಿಶಾದ ನಲವತ್ತೆರಡು ವಿಧಾನಸಭಾ ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ. ದೆಹಲಿ ಮತ್ತು ಹರಿಯಾಣದ ಎಲ್ಲಾ ಸಂಸದೀಯ ಸ್ಥಾನಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯುತ್ತಿದೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಮನೋಹರ್ ಲಾಲ್ ಖಟ್ಟರ್ ಮತ್ತು ಮೆಹಬೂಬಾ ಮುಫ್ತಿ ಸೇರಿದ್ದಾರೆ. ಖಟ್ಟರ್ ಅವರು ಕರ್ನಾಲ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತು ಮೆಹಬೂಬಾ ಮುಫ್ತಿ ಅನಂತನಾಗ್-ರಾಜೌರಿಯಿಂದ ಪಿಡಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com