ಜೂನ್ 4ರ ನಂತರ ದೇಶದಲ್ಲಿ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಬುಡಕಟ್ಟು ಜನಾಂಗದ ಜನಸಂಖ್ಯೆಯು ವೇಗವಾಗಿ ಕಡಿಮೆಯಾಗುತ್ತಿದೆ ಮತ್ತು ನುಸುಳುಕೋರರ ಸಂಖ್ಯೆಯು ಹೆಚ್ಚುತ್ತಿದೆ. ನುಸುಳುಕೋರರಿಂದ ಬುಡಕಟ್ಟು ಹೆಣ್ಣುಮಕ್ಕಳನ್ನು ಗುರಿಯಾಗಿಸಲಾಗುತ್ತಿದೆ. ಅವರನ್ನು ಜೀವಂತವಾಗಿ ಸುಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಮಾತನಾಡಿದರು.
Updated on

ರಾಂಚಿ/ಕೋಲ್ಕತ್ತಾ: ಜಾರ್ಖಂಡ್‌ನ ದುಮ್ಕಾದಲ್ಲಿ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಜೂನ್ 4 ರ ನಂತರ ದೇಶದಲ್ಲಿ ಭ್ರಷ್ಟರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಪಶ್ಚಿಮ ಬಂಗಾಳದ ಅಶೋಕನಗರ, ಉತ್ತರ 24 ಪರಗಣದಲ್ಲಿ ನಡೆದ ಮತ್ತೊಂದು ಪ್ರಚಾರ ಸಭೆಯಲ್ಲಿ, ಒಬಿಸಿಗಳ ನಂಬಿಕೆಗೆ ದ್ರೋಹ ಮಾಡಿದ್ದಕ್ಕಾಗಿ ಟಿಎಂಸಿ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, 77 ಮುಸ್ಲಿಂ ಸಮುದಾಯಗಳಿಗೆ ಒಬಿಸಿ ಪ್ರಮಾಣಪತ್ರ ನೀಡುವುದು ಅಸಾಂವಿಧಾನಿಕ ಎಂದು ಕಲ್ಕತ್ತಾ ಹೈಕೋರ್ಟ್ ಘೋಷಿಸಿದೆ. ಟಿಎಂಸಿ ಸರ್ಕಾರವು ಅಂಬೇಡ್ಕರ್ ಅವರು ಪರವಾಗಿ ನಿಂತಿದ್ದಕ್ಕೆ ವಿರುದ್ಧವಾಗಿ ಲಕ್ಷಾಂತರ ಒಬಿಸಿ ಯುವಕರ ಹಕ್ಕುಗಳನ್ನು ಕಸಿದುಕೊಂಡಿದೆ ಎಂದು ಹೇಳಿದರು.

ಜಾರ್ಖಂಡ್‌ನ ದುಮ್ಕಾದಲ್ಲಿ ಮಾತನಾಡಿದ ಅವರು, ಹಗರಣಗಳನ್ನು ಮುಂದುವರಿಸಲು ತಮ್ಮನ್ನು ಅಧಿಕಾರದಿಂದ ತೆಗೆದುಹಾಕಬೇಕೆಂದು ಕಾಂಗ್ರೆಸ್ ಮತ್ತು ಜೆಎಂಎಂ ಬಯಸಿವೆ. ಇಂಡಿಯಾ ಮೈತ್ರಿಕೂಟದ ನಾಯಕರು ಇದನ್ನು ಸ್ಪಷ್ಟವಾಗಿ ಕೇಳಿಸಿಕೊಳ್ಳಬೇಕು. ಅವರು ಮೋದಿಯ ಇಮೇಜ್ ಅನ್ನು ಕೆಡಿಸಲು ಎಷ್ಟು ಪ್ರಯತ್ನಿಸುತ್ತಾರೋ ಅಷ್ಟು ಕಮಲಗಳು ಜನರ ಪ್ರಯತ್ನದಿಂದ ಅರಳುತ್ತವೆ. ಕಾಂಗ್ರೆಸ್ ಆಡಳಿತದಲ್ಲಿ ನಕ್ಸಲಿಸಂ ಹೇಗೆ ಬೆಳೆಯುತ್ತಿದೆ ಎಂಬುದನ್ನು ಹೇಳಿದ ಮೋದಿ, ನಕ್ಸಲಿಸಂನಿಂದ ಹೆಚ್ಚು ಹಾನಿಗೊಳಗಾದವರು ಬುಡಕಟ್ಟು ಕುಟುಂಬಗಳು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಮಾತನಾಡಿದರು.
ದಕ್ಷಿಣದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಲಿದೆ; 400 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಗೆ ಗೆಲುವು: ಪ್ರಧಾನಿ ನರೇಂದ್ರ ಮೋದಿ (ಸಂದರ್ಶನ)

ಜಾರ್ಖಂಡ್ ಮತ್ತೊಂದು ಬೆದರಿಕೆಯನ್ನು ಎದುರಿಸುತ್ತಿದೆ. ಅದೆಂದರೆ ಒಳನುಸುಳುವಿಕೆ. ಸಂತಾಲ್ ಪರಗಣವು ಇದರಿಂದ ಹೆಚ್ಚು ಪ್ರಭಾವಿತವಾಗಿದೆ. ಏಕೆಂದರೆ ಬುಡಕಟ್ಟು ಜನಾಂಗದ ಜನಸಂಖ್ಯೆಯು ವೇಗವಾಗಿ ಕಡಿಮೆಯಾಗುತ್ತಿದೆ ಮತ್ತು ನುಸುಳುಕೋರರ ಸಂಖ್ಯೆಯು ಹೆಚ್ಚುತ್ತಿದೆ. ನುಸುಳುಕೋರರಿಂದ ಬುಡಕಟ್ಟು ಹೆಣ್ಣುಮಕ್ಕಳನ್ನು ಗುರಿಯಾಗಿಸಲಾಗುತ್ತಿದೆ. ಅವರನ್ನು ಜೀವಂತವಾಗಿ ಸುಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

ನಂತರ ಬಂಗಾಳದ ಪ್ರಚಾರ ಸಭೆಯಲ್ಲಿ, ಕಲ್ಕತ್ತಾ ಹೈಕೋರ್ಟ್ ಆದೇಶದ ನಂತರ ಸಿಎಂ ಹೇಳಿಕೆ ನೀಡಿದ್ದನ್ನು ಕಂಡು ನನಗೆ ಆಶ್ಚರ್ಯವಾಯಿತು. ತೃಣಮೂಲ ಕಾಂಗ್ರೆಸ್‌ನ ದ್ರೋಹವನ್ನು ನ್ಯಾಯಾಲಯ ಬಯಲು ಮಾಡಿದೆ. ಅವರು ಕೆಲವು ನ್ಯಾಯಾಧೀಶರನ್ನು ಪ್ರಶ್ನಿಸಿದರು. ಈಗ ನ್ಯಾಯಾಧೀಶರ ನಂತರ ಗೂಂಡಾಗಳನ್ನು ಕಳುಹಿಸಲಾಗುತ್ತದೆಯೇ? ಎಂದು ಪ್ರಶ್ನಿಸಿದರು.

ಮಮತಾ ಅವರು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳನ್ನು ಬೆಂಬಲಿಸುವುದಾಗಿ ಹೇಳಿದ್ದಕ್ಕಾಗಿ ಟೀಕಿಸಿದ ಪ್ರಧಾನಿ, ನೀವು ಸಿಪಿಎಂಗೆ ಒಂದು ಮತ ನೀಡಿದರೆ ಅದು ಟಿಎಂಸಿಗೆ ಹೋಗುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com