ಕಾಶ್ಮೀರ: ಪ್ರಪಾತಕ್ಕೆ ಉರುಳಿಬಿದ್ದ ಬಸ್, ಭೀಕರ ಅಪಘಾತದಲ್ಲಿ 21 ಮಂದಿ ಸಾವು

ಜಮ್ಮು ಜಿಲ್ಲೆಯಲ್ಲಿ ಗುರುವಾರ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ ಪ್ರಪಾತಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ.
 ಪ್ರಪಾತಕ್ಕೆ ಉರುಳಿಬಿದ್ದ ಬಸ್
ಪ್ರಪಾತಕ್ಕೆ ಉರುಳಿಬಿದ್ದ ಬಸ್
Updated on

ಶ್ರೀನಗರ: ಜಮ್ಮು ಜಿಲ್ಲೆಯಲ್ಲಿ ಗುರುವಾರ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ ಪ್ರಪಾತಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಜಿಲ್ಲೆಯ ಚೋಕಿ ಚೋರಾ ಬೆಲ್ಟ್‌ನ ತಂಗ್ಲಿ ಮೋರ್‌ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಬಸ್ಸು ಸುಮಾರು 150 ಅಡಿಗಳಷ್ಟು ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 ಪ್ರಪಾತಕ್ಕೆ ಉರುಳಿಬಿದ್ದ ಬಸ್
ಜಮ್ಮು-ಕಾಶ್ಮೀರ: ಪೂಂಚ್‌ನಲ್ಲಿ ಮೂವರು ಉಗ್ರರ ಸಹಚರರ ಬಂಧನ

ಈ ವಾಹನವು ಉತ್ತರ ಪ್ರದೇಶದ ಹತ್ರಾಸ್ ನಿಂದ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಶಿವ ಖೋರಿ ಪ್ರದೇಶಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರು ಮತ್ತು ಸ್ಥಳೀಯರನ್ನು ಒಳಗೊಂಡ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗಾಯಾಳುಗಳನ್ನು ಅಖ್ನೂರ್ ಆಸ್ಪತ್ರೆ ಮತ್ತು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು(ಜಿಎಂಸಿ) ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com