ತೆಲಂಗಾಣದಲ್ಲಿ ಜಾತಿ ಗಣತಿ ಆರಂಭ: ಇದು ದೇಶದ ಜಾತಿಗಣತಿಗೆ ನೀಲನಕ್ಷೆ- ಜೈರಾಮ್ ರಮೇಶ್

ಮುಂದಿನ ಕೆಲವು ವಾರಗಳಲ್ಲಿ 80,000 ಗಣತಿದಾರರು ಮನೆ ಮನೆಗಳಿಗೆ ತೆರಳಿ ಜಾತಿ ಗಣತಿ ಕಾರ್ಯ ಮಾಡಲಿದ್ದಾರೆ. ಅವರು 33 ಜಿಲ್ಲೆಗಳಲ್ಲಿ 1.17 ಕೋಟಿ ಕುಟುಂಬಗಳನ್ನು ಗಣತಿ ಮಾಡಲಿದ್ದಾರೆ
Jajram Ramesh
ಜೈರಾಮ್ ರಮೇಶ್
Updated on

ನವದೆಹಲಿ: ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಬಹುನಿರೀಕ್ಷಿತ ಜಾತಿ ಆಧಾರಿತ ಗಣತಿ ಕಾರ್ಯವನ್ನು ಆರಂಭಿಸಿದ್ದು,ಇದು ಐತಿಹಾಸಿಕ ಮತ್ತು ಕ್ರಾಂತಿಕಾರಿ' ಕ್ಷಣವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೈರಾಮ್ ರಮೇಶ್, ಮುಂದಿನ ಕೆಲವು ವಾರಗಳಲ್ಲಿ 80,000 ಗಣತಿದಾರರು ಮನೆ ಮನೆಗಳಿಗೆ ತೆರಳಿ ಜಾತಿ ಗಣತಿ ಕಾರ್ಯ ಮಾಡಲಿದ್ದಾರೆ. ಅವರು 33 ಜಿಲ್ಲೆಗಳಲ್ಲಿ 1.17 ಕೋಟಿ ಕುಟುಂಬಗಳನ್ನು ಗಣತಿ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

1931 ರಿಂದ ತೆಲಂಗಾಣದಲ್ಲಿ ಇದೇ ಮೊದಲ ಬಾರಿಗೆ ಜಾತಿ ಆಧಾರಿತ ಗಣತಿ ಕಾರ್ಯ ನೆಡಸಲಾಗುತ್ತಿದೆ. ಇದು ಐತಿಹಾಸಿಕ, ಕ್ರಾಂತಿಕಾರಿ ಕ್ಷಣವಾಗಿದ್ದು,ತೆಲಂಗಾಣ ಹೋರಾಟದ ಆಕಾಂಕ್ಷೆಗಳ ಸಾಕಾರಗೊಳಿಸುವಿಕೆ ಮತ್ತು ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪ್ರಮುಖ ಆದರ್ಶ ಈಡೇರಿಸುವುದಾಗಿದೆ. ಈ ವಾರದ ಆರಂಭದಲ್ಲಿ ಹೈದರಾಬಾದ್‌ನಲ್ಲಿ ರಾಹುಲ್ ಗಾಂಧಿ ಹೇಳಿದಂತೆ ಇದು ವಿರೋಧ ಪಕ್ಷಗಳ INDIA ಮೈತ್ರಿಕೂಟ ಸರ್ಕಾರ ನಡೆಸಲಿರುವ ಜಾತಿ ಗಣತಿಯ ನೀಲನಕ್ಷೆಯಾಗಿದೆ ಎಂದು ಅವರು ಹೇಳಿದ್ದಾರೆ.

Jajram Ramesh
ಜಾತಿ ಸಮೀಕ್ಷೆ ದೇಶದ ಎಕ್ಸ್ ರೇ ಇದ್ದಂತೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಣತಿ ಗ್ಯಾರಂಟಿ: ರಾಹುಲ್ ಗಾಂಧಿ

ಈ ಜಾತಿಗಣತಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗಿರುವ ಶೇ.50 ರಷ್ಟು ಮೀಸಲಾತಿಯ ಸುಪ್ರೀಂಕೋರ್ಟ್ ನಿರ್ಬಂಧವನ್ನು ರದ್ದುಗೊಳಿಸುವ ಕಾಂಗ್ರೆಸ್ ಗೆ ದೂರ ದೃಷ್ಟಿಗೆ ಕೇಂದ್ರವಾಗಿದೆ. ನಮ್ಮ ಸಂವಿಧಾನದಲ್ಲಿ ದೇಶದ ನಿರ್ಮಾತೃಗಳು ಕಲ್ಪಿಸಿದಂತೆ ದೇಶದಲ್ಲಿ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ನ್ಯಾಯದ ಕಲ್ಪನೆಗೆ ನಾವು ಬದ್ಧರಾಗಿದ್ದೇವೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com