ಜಮ್ಮು-ಕಾಶ್ಮೀರದ ಕಿಶ್ತ್ವಾರದಲ್ಲಿ ಎನ್ ಕೌಂಟರ್: ಸೇನಾ ಸಿಬ್ಬಂದಿಗೆ ಗಾಯ

ಸೇನೆ ಮತ್ತು ಪೊಲೀಸರ ಜಂಟಿ ಶೋಧ ತಂಡಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅಡಗಿಕೊಂಡಿದ್ದ ಭಯೋತ್ಪಾದಕರನ್ನು ತಡೆದಾಗ ಕೇಶ್ವಾನ್ ಅರಣ್ಯದಲ್ಲಿ ಎನ್‌ಕೌಂಟರ್ ನಡೆಯಿತು.
Representational image
ಸಾಂದರ್ಭಿಕ ಚಿತ್ರ
Updated on

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದೂರದ ಅರಣ್ಯ ಪ್ರದೇಶದಲ್ಲಿ ಇಂದು ಭಾನುವಾರ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆ ಮತ್ತು ಪೊಲೀಸರ ಜಂಟಿ ಶೋಧ ತಂಡಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅಡಗಿಕೊಂಡಿದ್ದ ಭಯೋತ್ಪಾದಕರನ್ನು ತಡೆದಾಗ ಕೇಶ್ವಾನ್ ಅರಣ್ಯದಲ್ಲಿ ಎನ್‌ಕೌಂಟರ್ ನಡೆಯಿತು.

ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯನ್ನು ಕೊಂದ ನಂತರ ಗುರುವಾರ ಸಂಜೆಯಿಂದ ಕುಂಟ್ವಾರಾ ಮತ್ತು ಕೇಶ್ವಾನ್ ಅರಣ್ಯಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

"ಕೇಶ್ವಾನ್-ಕಿಸ್ತವಾರ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭವಾಗಿದೆ. ಮೂವರಿಂದ ನಾಲ್ಕು ಮಂದಿ ಉಗ್ರರು ಸಿಕ್ಕಿಬಿದ್ದಿರುವ ಶಂಕೆಯಿದೆ ಎಂದು ನಂಬಲಾಗಿದೆ" ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಇದೇ ಭಯೋತ್ಪಾದಕರು ಇಬ್ಬರು ಮುಗ್ಧ ಗ್ರಾಮಸ್ಥರನ್ನು ಕೊಂದು ಹಾಕಿದ್ದರು. ಎರಡೂ ಕಡೆಯ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com