ಮಹಾರಾಷ್ಟ್ರ: ಬಿಜೆಪಿ ಪ್ರಣಾಳಿಕೆ ಭರವಸೆಗಳೇನು ಅಂದರೆ...

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈನಲ್ಲಿ 25 ಅಂಶಗಳ 'ಸಂಕಲ್ಪ ಪತ್ರ 2024' ನ್ನು ಅನಾವರಣಗೊಳಿಸಿದರು.
HM Amit shah at Maharastra
ಮಹಾರಾಷ್ಟ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾonline desk
Updated on

ಮುಂಬೈ: ಭಾರತೀಯ ಜನತಾ ಪಕ್ಷ ಮಹಾರಾಷ್ಟ್ರದಲ್ಲಿ ಕಟ್ಟುನಿಟ್ಟಾದ ನಿಬಂಧನೆಗಳೊಂದಿಗೆ ಮತಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದೆ ಮತ್ತು ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ತರಬೇತಿಗಾಗಿ ಕೌಶಲ್ಯ ಗಣತಿ ಮತ್ತು ಕಡಿಮೆ ಆದಾಯದ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ಹೇಳಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈನಲ್ಲಿ 25 ಅಂಶಗಳ 'ಸಂಕಲ್ಪ ಪತ್ರ 2024' ನ್ನು ಅನಾವರಣಗೊಳಿಸಿದರು. ಪ್ರಣಾಳಿಕೆಯ ಪ್ರಕಾರ ಮಹಿಳೆಯರಿಗೆ ಮಹಾಯುತಿ ಸರ್ಕಾರದ ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ ಹಣಕಾಸಿನ ನೆರವು ಘಟಕವನ್ನು ತಿಂಗಳಿಗೆ 1,500 ರೂ.ನಿಂದ 2,100 ರೂ.ಗೆ ಹೆಚ್ಚಿಸಲಾಗುವುದು ಎಂಬ ಭರವಸೆ ನೀಡಲಾಗಿದೆ.

ನವೆಂಬರ್ 20 ರ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 10 ಲಕ್ಷ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 10,000 ರೂಪಾಯಿಗಳ ಸ್ಟೈಫಂಡ್ ನೀಡುವ ಭರವಸೆ ಇದೆ.

ಆಡಳಿತಾರೂಢ ಮಹಾಯುತಿ ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವನ್ನು ಒಳಗೊಂಡಿದೆ.

HM Amit shah at Maharastra
ಮಹಾರಾಷ್ಟ್ರ ಚುನಾವಣೆ ನಂತರ ಮಹಾಯುತಿ ಮುಖ್ಯಮಂತ್ರಿ ಅಭ್ಯರ್ಥಿ ನಿರ್ಧಾರ: ಅಮಿತ್ ಶಾ

ಬಲವಂತದ ಮತ್ತು ಮೋಸದ ಮತಾಂತರಗಳ ವಿರುದ್ಧ ಕಠಿಣ ಕ್ರಮಕ್ಕೆ ಅವಕಾಶ ಕಲ್ಪಿಸುವ ಮೂಲಕ ಮತಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಲಾಗುವುದು ಎಂದು ಬಿಜೆಪಿಯ ಪ್ರಣಾಳಿಕೆ ಭರವಸೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com