ಇಂದಿರಾ ಗಾಂಧಿ ಮರಳಿ ಬಂದರೂ ಆರ್ಟಿಕಲ್ 370 ಮರುಸ್ಥಾಪನೆ ಆಗಲ್ಲ: ಅಮಿತ್ ಶಾ

ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಟ್ಟುಕೊಳ್ಳಬೇಕು.
Amitsha, Indiragandhi
ಅಮಿತ್ ಶಾ, ಇಂದಿರಾಗಾಂಧಿ ಸಾಂದರ್ಭಿಕ ಚಿತ್ರ
Updated on

ಧುಲೆ: ಇಂದಿರಾ ಗಾಂಧಿ ಮರಳಿ ಬಂದರೂ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ಮರು ಜಾರಿಯಾಗಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಏನೇ ಬಂದರೂ 370ನೇ ವಿಧಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ. ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿದರೂ, 370 ನೇ ವಿಧಿ ಮರು ಜಾರಿ ಅಸಾಧ್ಯ ಎಂದರು.

ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.

ಮುಸ್ಲಿಮರಿಗೆ ಮೀಸಲಾತಿ ನೀಡಬೇಕಾದರೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಡಿತಗೊಳಿಸಬೇಕಾಗುತ್ತದೆ. ರಾಹುಲ್ ಬಾಬಾ, ನೀವು ಮಾತ್ರವಲ್ಲ, ನಿಮ್ಮ ನಾಲ್ಕು ತಲೆಮಾರುಗಳು ಬಂದರೂ, ಅವರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾದ ಕೋಟಾವನ್ನು ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ಸಾಧ್ಯವಿಲ್ಲ ಎಂದು ಶಾ ಹೇಳಿದರು. ಕೆಲವು ದಿನಗಳ ಹಿಂದೆ ಉಲೇಮಾಗಳು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಭೇಟಿಯಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕು ಎಂದಿದ್ದರು.

Amitsha, Indiragandhi
ಜಗತ್ತಿನ ಯಾವ ಶಕ್ತಿಯಿಂದಲೂ ಆರ್ಟಿಕಲ್ 370 ಮರುಸ್ಥಾಪನೆ ಸಾಧ್ಯವಿಲ್ಲ: ಪ್ರಧಾನಿ ಮೋದಿ

ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಮಹಾ ವಿಕಾಸ್ ಅಘಾಡಿ ಗುಂಪನ್ನು ಔರಂಗಜೇಬ್ ಅಭಿಮಾನಿಗಳ ಕ್ಲಬ್ ಎಂದು ಬಣ್ಣಿಸಿದ ಶಾ, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಶಿವಾಜಿ ಮಹಾರಾಜ್ ಮತ್ತು ವೀರ್ ಸಾವರ್ಕರ್ ಅವರ ಆದರ್ಶಗಳಿಗೆ ಬದ್ಧವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com