BJP president JP Nadda- AICC President Mallikarjuna kharge
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆonline desk

ನೀತಿ ಸಂಹಿತೆ ಉಲ್ಲಂಘನೆ ದೂರು: ನಡ್ಡಾ, ಖರ್ಗೆ ಪ್ರತಿಕ್ರಿಯೆ ಕೇಳಿದ ಚುನಾವಣಾ ಆಯೋಗ

ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ವಿರುದ್ಧ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ.
Published on

ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಚುನಾವಣಾ ಆಯೋಗ ಪ್ರತಿಕ್ರಿಯೆ ಕೇಳಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ವಿರುದ್ಧ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತ್ಯೇಕ ಪತ್ರ ಬರೆದಿರುವ ಚುನಾವಣಾ ಆಯೋಗ, ದೂರಿನ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಳಿದೆ.

ಆಯೋಗ ಎರಡು ಪಕ್ಷಗಳ ನಡುವೆ ದೂರುಗಳನ್ನು ವಿನಿಮಯ ಮಾಡಿಕೊಂಡಿದೆ. ಚುನಾವಣಾ ಆಯೋಗ ಸೋಮವಾರ (ನವೆಂಬರ್ 18) ಮಧ್ಯಾಹ್ನ 1 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಎರಡೂ ಪಕ್ಷದ ಅಧ್ಯಕ್ಷರನ್ನು ಕೇಳಿದೆ.

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕ ಸೌಹಾರ್ದತೆ ಉಂಟಾಗದಂತೆ ತಾರಾ ಪ್ರಚಾರಕರು ಮತ್ತು ನಾಯಕರನ್ನು ಹಿಡಿತದಲ್ಲಿಟ್ಟುಕೊಳ್ಳುವಂತೆ ಆಯೋಗ ನೀಡಿದ್ದ ಈ ಹಿಂದಿನ ಸಲಹೆಯನ್ನು ಅಧ್ಯಕ್ಷರುಗಳಿಗೆ ನೆನಪಿಸಿದೆ.

ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಸಂವಿಧಾನದ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಹುಲ್ ಗಾಂಧಿ ಹೇಳಿಕೆಗಳು ರಾಜ್ಯಗಳ ನಡುವೆ ವೈಷಮ್ಯವನ್ನು ಬಿತ್ತುವ ಉದ್ದೇಶವನ್ನು ಹೊಂದಿವೆ ಎಂದು ಬಿಜೆಪಿ ಆರೋಪಿಸಿದೆ.

ನವೆಂಬರ್ 6 ರಂದು, ತಮ್ಮ ಮಹಾರಾಷ್ಟ್ರ ಚುನಾವಣಾ ಪ್ರಚಾರದ ಸಮಯದಲ್ಲಿ, ರಾಹುಲ್ ಗಾಂಧಿ "ರಾಜ್ಯಗಳನ್ನು ಪರಸ್ಪರರ ವಿರುದ್ಧ ಎತ್ತಿಕಟ್ಟಲು" ಪ್ರಯತ್ನಿಸಿದರು ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.

BJP president JP Nadda- AICC President Mallikarjuna kharge
ಮಹಾರಾಷ್ಟ್ರ ರಾಜಕೀಯದಲ್ಲಿ ಅದಾನಿ ಮಧ್ಯಪ್ರವೇಶ: ಖರ್ಗೆ ಕಿಡಿ

ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತು ಇನ್ನೊಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಎರಡು ಪ್ರತ್ಯೇಕ ದೂರುಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ಪ್ರಚಾರದ ಸಮಯದಲ್ಲಿ ಇಬ್ಬರೂ ನಾಯಕರು ತಮ್ಮ ಭಾಷಣಗಳಲ್ಲಿ ವಿಭಜನೆ, ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಎಕ್ಸ್ ಪೋಸ್ಟ್‌ನಲ್ಲಿ ದೂರಿನ ಪತ್ರಗಳನ್ನು ಲಗತ್ತಿಸಿದ್ದಾರೆ ಮತ್ತು ಚುನಾವಣಾ ನಿಯಮಗಳನ್ನು ಉಲ್ಲಂಘಿಸಿರುವ ಬಿಜೆಪಿ ನಾಯಕತ್ವದ ವಿರುದ್ಧ ತನಿಖೆ ನಡೆಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ನವೆಂಬರ್ 20 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಮಹಾರಾಷ್ಟ್ರ ಒಂದೇ ಹಂತದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಎರಡೂ ರಾಜ್ಯಗಳ ಮತ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com