ಮಹಾರಾಷ್ಟ್ರ: ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಕಾರಿನ ಮೇಲೆ ಕಲ್ಲು ತೂರಾಟ; ಗಂಭೀರ ಗಾಯ

ರಾತ್ರಿ 8 ಗಂಟೆ ಸುಮಾರಿಗೆ ದೇಶಮುಖ್ ನಾರ್ಖೇಡ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಕಟೋಲ್‌ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
stone pelted on Anil Deshmukh's car
ಅನಿಲ್ ದೇಶ್ ಮುಖ್ ಕಾರಿನ ಮೇಲೆ ಕಲ್ಲು ತೂರಾಟonline desk
Updated on

ನಾಗ್ಪುರ: ನಾಗ್ಪುರ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕ ಅನಿಲ್ ದೇಶ್‌ಮುಖ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾತ್ರಿ 8 ಗಂಟೆ ಸುಮಾರಿಗೆ ದೇಶಮುಖ್ ನಾರ್ಖೇಡ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಕಟೋಲ್‌ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಕಟೋಲ್ ಬಳಿಯ ಜಲಖೇಡ ರಸ್ತೆಯ ಬೆಲ್ಫಟಾ ಬಳಿ ಕೆಲವು ಅಪರಿಚಿತ ವ್ಯಕ್ತಿಗಳು ದೇಶಮುಖ ಅವರ ಕಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ದಾಳಿಯ ವೇಳೆ ಗಾಯಗೊಂಡ ದೇಶಮುಖ್ ಅವರನ್ನು ತಕ್ಷಣವೇ ಕಟೋಲ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

stone pelted on Anil Deshmukh's car
ಚುನಾವಣೆ, ಉಪಚುನಾವಣೆ: 1,000 ಕೋಟಿ ರೂ. ಮೌಲ್ಯ ನಗದು, ವಸ್ತು ಜಪ್ತಿ!

ನಾಗ್ಪುರ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಪೊದ್ದಾರ್ ಘಟನೆಯನ್ನು ಖಚಿತಪಡಿಸಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆ ಆರಂಭವಾಗಿದೆ. ಪೊಲೀಸರು ದಾಳಿಗೆ ಕಾರಣರಾದವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ. ಎನ್‌ಸಿಪಿ ದಾಳಿಯನ್ನು ಖಂಡಿಸಿದೆ ಮತ್ತು ಇದು ರಾಜ್ಯದಲ್ಲಿ "ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ವೈಫಲ್ಯ" ಕ್ಕೆ ಉದಾಹರಣೆಯಾಗಿದೆ ಎಂದು ಹೇಳಿದೆ.

"...ಪ್ರಜಾಪ್ರಭುತ್ವ ನಾಶವಾಗುತ್ತಿದೆ. ಇದಕ್ಕೆ ಉದಾಹರಣೆ ಇಂದು ರಾಜ್ಯದ ಮಾಜಿ ಗೃಹ ಸಚಿವ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಅನಿಲ್ ದೇಶಮುಖ್ ಅವರ ಮೇಲೆ ಚುನಾವಣಾ ಸಭೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ಹೇಡಿಗಳ ದಾಳಿಯ ರೂಪದಲ್ಲಿ ಹೊರಬಿದ್ದಿದೆ ಎಂದು ಎನ್‌ಸಿಪಿ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಬರೆದಿದೆ.

ನವೆಂಬರ್ 20 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇಂದು ಪ್ರಚಾರದ ಕೊನೆಯ ದಿನವಾಗಿತ್ತು.

ದೇಶಮುಖ್ ಪುತ್ರ ಸಲೀಲ್ ದೇಶಮುಖ್ ಬಿಜೆಪಿಯ ಚರಣಸಿಂಗ್ ಠಾಕೂರ್ ವಿರುದ್ಧ ಎನ್‌ಸಿಪಿ (ಶರದ್ ಪವಾರ್) ಟಿಕೆಟ್‌ನಲ್ಲಿ ಕಟೋಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com