ಗೋಧ್ರಾ ರೈಲು ದುರಂತ ಆಧಾರಿತ ಸಿನಿಮಾಗೆ ಮಧ್ಯಪ್ರದೇಶ ಸರ್ಕಾರ ತೆರಿಗೆ ವಿನಾಯಿತಿ ಘೋಷಣೆ

ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಘೋಷಣೆ ಮಾಡಿದ್ದು, ಸಿನಿಮಾ ವೀಕ್ಷಿಸಲು ತಾನೂ ಹೋಗುವುದಾಗಿ ಹೇಳಿದ್ದಾರೆ.
ಚಿತ್ರದ ಪೋಸ್ಟರ್
ಚಿತ್ರದ ಪೋಸ್ಟರ್
Updated on

ಭೋಪಾಲ್: 2002 ರ ಗೋಧ್ರಾ ರೈಲು ದುರಂತ ಘಟನೆಯನ್ನು ಆಧರಿಸಿದ 'ದಿ ಸಬರಮತಿ ರಿಪೋರ್ಟ್' ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವುದಾಗಿ ಮಧ್ಯಪ್ರದೇಶ ಸರ್ಕಾರ ಮಂಗಳವಾರ ಘೋಷಿಸಿದೆ.

ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಘೋಷಣೆ ಮಾಡಿದ್ದು, ಸಿನಿಮಾ ವೀಕ್ಷಿಸಲು ತಾನೂ ಹೋಗುವುದಾಗಿ ಹೇಳಿದ್ದಾರೆ.

ಧೀರಜ್ ಸರ್ನಾ ನಿರ್ದೇಶನದ ಈ ಚಿತ್ರವು ಗುಜರಾತ್‌ನಲ್ಲಿ ವ್ಯಾಪಕ ಕೋಮು ಗಲಭೆಗೆ ಕಾರಣವಾದ ಗೋಧ್ರಾ ರೈಲು ದುರಂತದ ಘಟನೆಗಳನ್ನು ಒಳಗೊಂಡಿದೆ.

"ದಿ ಸಬರಮತಿ ರಿಪೋರ್ಟ್' ತುಂಬಾ ಒಳ್ಳೆಯ ಸಿನಿಮಾ. ನಾನೇ ಸಿನಿಮಾ ನೋಡಲು ಹೋಗುತ್ತೇನೆ. ನನ್ನ ಸಚಿವರು, ಶಾಸಕರು, ಸಂಸದರಿಗೂ ಈ ಸಿನಿಮಾ ನೋಡುವಂತೆ ಹೇಳಿದ್ದೆ. ರಾಜ್ಯದಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತೇವೆ. ಜನರು ಇದನ್ನು ವೀಕ್ಷಿಸಬಹುದು ಎಂದು ಯಾದವ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಚಿತ್ರದ ಪೋಸ್ಟರ್
ದಿ ಸಬರಮತಿ ರಿಪೋರ್ಟ್ ಚಿತ್ರದ ಟ್ರೈಲರ್

ವೋಟ್ ಬ್ಯಾಂಕ್ ಉದ್ದೇಶಕ್ಕಾಗಿ ಗೋಧ್ರಾ ಘಟನೆಯ ಬಗ್ಗೆ ಪ್ರತಿಪಕ್ಷಗಳು "ಕೊಳಕು ರಾಜಕೀಯ" ದಲ್ಲಿ ತೊಡಗಿವೆ ಎಂದು ಮೋಹನ್ ಯಾದವ್ ವಾಗ್ದಾಳಿ ನಡೆಸಿದ್ದು, ಆ ಸಮಯದಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರದ ಗೌರವವನ್ನು ಕಾಪಾಡಿದ್ದಾರೆ ಎಂದು ಶ್ಲಾಘಿಸಿದರು.

ಇನ್ನು ‘ದಿ ಸಬರಮತಿ ರಿಪೋರ್ಟ್’ ಸಿನಿಮಾವನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಸುಳ್ಳು ನಿರೂಪಣೆಯು ಸೀಮಿತ ಅವಧಿಯವರೆಗೆ ಮಾತ್ರ ಇರುತ್ತದೆ ಎಂದು ಹೇಳಿದ್ದಾರೆ.

‘ಸಾಮಾನ್ಯ ಜನರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಸುಳ್ಳಿನ ನಿರೂಪಣೆ ಕ್ಷಣಿಕ ಕಾಲಕ್ಕೆ ಮಾತ್ರ ಇರುತ್ತದೆ. ಕೊನೆಗೂ ಸತ್ಯ ಹೊರಗೆ ಬರುತ್ತದೆ’ ಎಂದು ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com