ಮಹಾರಾಷ್ಟ್ರದ ಸಿಎಂ ಆಯ್ಕೆ ಕಸರತ್ತು: ದೇವೇಂದ್ರ ಫಡ್ನವಿಸ್‌ ಪರ RSS ಮತ್ತು NCP ಲಾಬಿ!

ಡಿಸಿಎಂ ಅಜಿತ್ ಪವಾರ್ ಅವರು ತಮ್ಮ ಅಧಿಕೃತ ಬಂಗಲೆಯಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಸಭೆ ನಡೆಸಿದರು. ಅಲ್ಲಿ ಬಿಜೆಪಿ 132 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
Devendra Fadnavis
ದೇವೇಂದ್ರ ಫಡ್ನವೀಸ್TNIE
Updated on

ಮುಂಬೈ: ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಮಾಡುವಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ರಾಷ್ಟ್ರೀಯ ಸ್ವಯಂಸೇವಾ ಸಂಘ(RSS) ಲಾಬಿ ನಡೆಸುತ್ತಿದೆ.

ಡಿಸಿಎಂ ಅಜಿತ್ ಪವಾರ್ ಅವರು ತಮ್ಮ ಅಧಿಕೃತ ಬಂಗಲೆಯಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಸಭೆ ನಡೆಸಿದರು. ಅಲ್ಲಿ ಬಿಜೆಪಿ 132 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ರಾಜ್ಯ ವಿಧಾನಸಭೆಯಲ್ಲಿ ಮಹಾಯುತಿ 235 ಸ್ಥಾನಗಳನ್ನು ಪಡೆದುಕೊಂಡಿರುವ ಕುರಿತು ಚರ್ಚಿಸಿದ್ದಾರೆ.

ಎನ್‌ಸಿಪಿಯ ಮೂಲಗಳು, ಅಜಿತ್ ಪವಾರ್ ಅವರು ಏಕನಾಥ್ ಶಿಂಧೆಗಿಂತ ಹೆಚ್ಚಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಲಿ ಎಂದು ಸೂಚಿಸಿದ್ದಾರೆ. ಆದ್ದರಿಂದ, ಫಡ್ನವಿಸ್ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿ ಮುಖ್ಯಮಂತ್ರಿಯಾಗಿ ನೇಮಿಸಿದರೆ ಎನ್‌ಸಿಪಿ ಅವರಿಗೆ ಬೆಂಬಲ ನೀಡುತ್ತದೆ. ಸಭೆಯಲ್ಲಿ ಅಗತ್ಯವಿದ್ದರೆ ಈ ಸಂಬಂಧ ನಿರ್ಣಯವನ್ನು ಅಂಗೀಕರಿಸಿ, ಸಿಎಂ ಆಗಿ ಫಡ್ನವಿಸ್ ಅವರಿಗೆ ತಮ್ಮ ಬೆಂಬಲವನ್ನು ನೀಡುವುದಾಗಿ ಚರ್ಚಿಸಲಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಬಿಜೆಪಿಯ ಉನ್ನತ ನಾಯಕತ್ವದ ನಿರ್ಧಾರಕ್ಕಾಗಿ ನಾವು ಕಾಯುತ್ತಿದ್ದೇವೆ. ಅದರ ನಂತರ, ನಮ್ಮ ಪಕ್ಷದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಎನ್‌ಸಿಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಇದಲ್ಲದೆ, ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಬೇಕು ಎಂದು ಬಿಜೆಪಿ ಮಾತೃ ಸಂಸ್ಥೆ RSS ಕೂಡ ಲಾಬಿ ಮಾಡುತ್ತಿದೆ. ಬಿಜೆಪಿ ಏಕಾಂಗಿಯಾಗಿ 132 ಸ್ಥಾನಗಳನ್ನು ಪಡೆದುಕೊಂಡಿದೆ. ಇದು 288 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಮ್ಯಾಜಿಕ್ ಸಂಖ್ಯೆ 145. ಶಿವಸೇನೆ 57 ಶಾಸಕರನ್ನು ಹೊಂದಿದ್ದರೆ, ಎನ್‌ಸಿಪಿ 41 ಹೊಂದಿದೆ. ಆದ್ದರಿಂದ, ಸರ್ಕಾರ ರಚನೆಗೆ ಬಿಜೆಪಿ ತನ್ನ ಮೈತ್ರಿ ಪಾಲುದಾರರ ಮೇಲೆ ಹೆಚ್ಚು ಅವಲಂಬಿತವಾಗಿಲ್ಲ. ಡಿಸಿಎಂ ಹುದ್ದೆಯಿಂದ ಕೆಳಗಿಳಿದ ನಂತರ ಫಡ್ನವೀಸ್ ಮುಖ್ಯಮಂತ್ರಿಯಾಗುವುದೇ ಉತ್ತಮ. ಇದಲ್ಲದೆ, ಫಡ್ನವಿಸ್ ಮುಖ್ಯಮಂತ್ರಿಯಾಗುವ ಭರವಸೆಯೊಂದಿಗೆ ರಾಜ್ಯ ಚುನಾವಣೆಯ ಸಮಯದಲ್ಲಿ ಆರ್‌ಎಸ್‌ಎಸ್ ಶ್ರಮಿಸಿದೆ ಎಂದು ಹಿರಿಯ ಆರ್‌ಎಸ್‌ಎಸ್ ಕಾರ್ಯನಿರ್ವಾಹಕರೊಬ್ಬರು ಹೇಳಿದರು.

Devendra Fadnavis
ಅಜಿತ್‌ ಹೆಚ್ಚು ಸ್ಥಾನ ಗೆದ್ದಿರಬಹುದು, ಆದರೆ ಇಡೀ ಮಹಾರಾಷ್ಟ್ರಕ್ಕೆ ಗೊತ್ತು NCP ಸ್ಥಾಪಿಸಿದ್ದು ಯಾರು ಅಂತ: ಶರದ್ ಪವಾರ್

ಮತ್ತೊಂದೆಡೆ, ಹಾಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯನ್ನು ಎದುರಿಸಲಾಗಿದೆ ಮತ್ತು ಮಹಾಯುತಿಯ ಯಶಸ್ಸಿನಲ್ಲಿ ಅವರ ಕೊಡುಗೆಯನ್ನು ಕಡೆಗಣಿಸಲಾಗುವುದಿಲ್ಲ ಎಂದು ಶಿವಸೇನೆ ನಾಯಕರು ವಾದಿಸುತ್ತಿದ್ದಾರೆ. ಈ ಯಶಸ್ಸು ಕೇವಲ ಬಿಜೆಪಿ ಮತ್ತು ಎನ್‌ಸಿಪಿಯಿಂದಲ್ಲ. ಇದು ಮಹಾಯುತಿಯೊಳಗಿನ ಟೀಮ್ ವರ್ಕ್‌ನ ಫಲಿತಾಂಶವಾಗಿದೆ. ಈ ಚುನಾವಣಾ ಯಶಸ್ಸಿನ ನಾಯಕ ಏಕನಾಥ್ ಶಿಂಧೆ. ಆದ್ದರಿಂದ, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ನೈಸರ್ಗಿಕ ಆಯ್ಕೆ ಮತ್ತು ಹಕ್ಕುದಾರರು. ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡದಿದ್ದರೆ ಬಿಜೆಪಿಯ ಮಿತ್ರಪಕ್ಷಗಳಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಬಿಎಂಸಿ ಚುನಾವಣೆಯವರೆಗೂ ಶಿಂಧೆ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ. ಇದರಿಂದ ಅವರು ಭಾರತದ ಶ್ರೀಮಂತ ನಾಗರಿಕ ಸಂಸ್ಥೆಯಾದ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ಅನ್ನು ಸಹ ಗೆಲ್ಲಬಹುದು ಎಂದು ಶಿವಸೇನೆಯ ಮೂಲಗಳು ತಿಳಿಸಿವೆ.

ಆದರೆ, ಸಂಸದೀಯ ಮಂಡಳಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಮಾಲೋಚಿಸಿದ ನಂತರ ಕೇಂದ್ರ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಸ್ಥಾನದ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com