'ಸೋತಾಗ ಮಾತ್ರ EVM ಟ್ಯಾಂಪರ್ಡ್, ಗೆದ್ದಾಗ ಇಲ್ಲ': ಬ್ಯಾಲೆಟ್ ಪೇಪರ್ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಚುನಾವಣೆಯಲ್ಲಿ ಸೋತಾಗ ಮಾತ್ರ ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ) ಟ್ಯಾಂಪರಿಂಗ್ ಆರೋಪಗಳು ಕೇಳಿಬರುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಚುನಾವಣೆಗಳನ್ನು ಮತ್ತೆ ಬ್ಯಾಲೆಟ್ ಪೇಪರ್ ಮತದಾನದ ಮೂಲಕ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಚುನಾವಣೆಯಲ್ಲಿ ಸೋತಾಗ ಮಾತ್ರ ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ) ಟ್ಯಾಂಪರಿಂಗ್ ಆರೋಪಗಳು ಕೇಳಿಬರುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ, "ಏನಾಗುತ್ತದೆ ಎಂದರೆ, ನೀವು ಚುನಾವಣೆಯಲ್ಲಿ ಗೆದ್ದಾಗ, ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವುದಿಲ್ಲ. ಆದರೆ ನೀವು ಚುನಾವಣೆಯಲ್ಲಿ ಸೋತಾಗ, ಇವಿಎಂಗಳನ್ನು ಟ್ಯಾಂಪರ್ ಮಾಡಲಾಗುತ್ತದೆ ಟೀಕಿಸಿದೆ.

"ನಿಮ್ಮ ಬಳಿ ಆಸಕ್ತಿದಾಯಕ ಪಿಐಎಲ್‌ಗಳಿವೆ. ಈ ಅದ್ಭುತ ವಿಚಾರಗಳನ್ನು ನೀವು ಹೇಗೆ ಪಡೆಯುತ್ತೀರಿ?" ಎಂದು ವಿಭಾಗೀಯ ಪೀಠ ಅರ್ಜಿದಾರ ಕೆಎ ಪೌಲ್ ಅವರನ್ನು ಪ್ರಶ್ನಿಸಿತು.

ಅರ್ಜಿದಾರರು ಮೂರು ಲಕ್ಷಕ್ಕೂ ಹೆಚ್ಚು ಅನಾಥರು ಮತ್ತು 40 ಲಕ್ಷ ವಿಧವೆಯರನ್ನು ರಕ್ಷಿಸಿದ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ನೀವು ಈ ರಾಜಕೀಯ ಕ್ಷೇತ್ರಕ್ಕೆ ಏಕೆ ಬರುತ್ತಿದ್ದೀರಿ? ನಿಮ್ಮ ಕೆಲಸದ ಕ್ಷೇತ್ರವು ತುಂಬಾ ವಿಭಿನ್ನವಾಗಿದೆ" ಎಂದು ಪೀಠ ಪ್ರಶ್ನಿಸಿತು.

ಸಂಗ್ರಹ ಚಿತ್ರ
ನಮಗೆ ಇವಿಎಂ ಬೇಡ: ಮಹಾರಾಷ್ಟ್ರ ಹೀನಾಯ ಸೋಲಿನ ಬೆನ್ನಲ್ಲೇ ಬ್ಯಾಲೆಟ್ ಪೇಪರ್‌ಗೆ ಪಟ್ಟು ಹಿಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಪೌಲ್ ಅವರು ತಾವು 150 ಕ್ಕೂ ಹೆಚ್ಚು ದೇಶಗಳಿಗೆ ಹೋಗಿರುವುದಾಗಿ ಹೇಳಿದ ನಂತರ, ಪ್ರತಿಯೊಂದು ರಾಷ್ಟ್ರಗಳು ಬ್ಯಾಲೆಟ್ ಪೇಪರ್ ಮತದಾನವನ್ನು ಹೊಂದಿವೆಯೇ ಅಥವಾ ಎಲೆಕ್ಟ್ರಾನಿಕ್ ಮತದಾನವನ್ನು ಬಳಸುತ್ತವೆಯೇ ಎಂದು ಪೀಠ ಪ್ರಶ್ನಿಸಿತು.

ಈ ಹಿಂದೆ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂದ ಆರೋಪ-ಪ್ರತ್ಯರೋಪ ಮಾಡಿದ್ದನ್ನು ಸ್ಮರಿಸಿದ ನ್ಯಾಯಾದೀಶರು, ಅರ್ಜಿದಾರರ ವಾದವನ್ನು ತಳ್ಳಿಹಾಕಿದರು. '

'ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ'' ಎಂದು ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿತು.

ಬ್ಯಾಲೆಟ್ ಪೇಪರ್ ಮತದಾನದ ಹೊರತಾಗಿ, ಮತದಾನದ ಸಮಯದಲ್ಲಿ ಮತದಾರರಿಗೆ ಹಣ, ಮದ್ಯ ಅಥವಾ ಇತರ ವಸ್ತುಗಳನ್ನು ವಿತರಿಸಿದ್ದು ಕಂಡುಬಂದಲ್ಲಿ ಕನಿಷ್ಠ ಐದು ವರ್ಷಗಳವರೆಗೆ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವುದು ಸೇರಿದಂತೆ ಹಲವಾರು ನಿರ್ದೇಶನಗಳನ್ನು ಮನವಿಯಲ್ಲಿ ಕೋರಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com